ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆಆರ್‌ಐಡಿಎಲ್‌ಗೆ ವಹಿಸಿದ ಕಾಮಗಾರಿ ತನಿಖೆ ನಡೆಸಿ’

Last Updated 16 ಮಾರ್ಚ್ 2022, 22:13 IST
ಅಕ್ಷರ ಗಾತ್ರ

ಬೆಂಗಳೂರು: ’ಬಿಬಿಎಂಪಿ ವ್ಯಾಪ್ತಿಯಲ್ಲಿ 2015–16ರಿಂದ 2021–22ರ ನಡುವೆ ವಿವಿಧ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌) ಮೂಲಕ ನಿರ್ವಹಿಸಲಾಗಿದ್ದು, ₹12,944 ಕೋಟಿ ಅನುದಾನವನ್ನೂ ನಿಗಮಕ್ಕೆ ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ ಶೇ 50ಕ್ಕೂ ಹೆಚ್ಚು ಕಾಮಗಾರಿಗಳು ನಡೆದೇ ಇಲ್ಲ. ಆದರೂ ಹಣ ಪಾವತಿಸಲಾಗಿದೆ’ ಎಂದು ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ಅವರು ದೂರು ಸಲ್ಲಿಸಿದ್ದಾರೆ.

‘ಕೆಆರ್‌ಐಡಿಎಲ್‌ ನಡೆಸಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ನಡೆಯದ ಕಾಮಗಾರಿಗೂ ಬಿಲ್ ಪಾವತಿಸಲಾಗಿದ್ದು, ಇದರಲ್ಲಿ 6 ಐಎಫ್‌ಎಸ್‌ ಅಧಿಕಾರಿಗಳು, 62 ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸಿಐಡಿಯಿಂದ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ನಿರ್ವಹಣೆ ಮಾಡಬೇಕಿರುವ ಕೆಆರ್‌ಐಡಿಎಲ್‌ ಸಂಸ್ಥೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳನ್ನು ವಹಿಸಿರುವುದೇ ನಿಯಮಬಾಹಿರ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT