ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

164 ಕೃಷಿ ಸಂಜೀವಿನಿ ವಾಹನ ಶೀಘ್ರ ಸೇವೆಗೆ: ಕೃಷಿ ಸಚಿವ ಬಿ.ಸಿ.ಪಾಟೀಲ 

Last Updated 8 ಮಾರ್ಚ್ 2022, 16:09 IST
ಅಕ್ಷರ ಗಾತ್ರ

ಬೆಂಗಳೂರು: ರೈತರ ಹೊಲಕ್ಕೆ ಹೋಗಿ ನೀರು, ಮಣ್ಣು ಮತ್ತು ಬೆಳೆಯನ್ನು ಪರೀಕ್ಷಿಸುವ ಸಂಚಾರಿ ಪ್ರಯೋಗಾಲಯದ ಸೌಲಭ್ಯ ಹೊಂದಿರುವ 164 ‘ಕೃಷಿ ಸಂಜೀವಿನಿ’ ವಾಹನಗಳನ್ನು ಶೀಘ್ರದಲ್ಲಿ ಸೇವೆಗೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಗೋವಿಂದರಾಜು ಅವರು ಮಂಗಳವಾರ ಮಂಡಿಸಿದ ಗಮನ ಸೆಳೆಯವ ಸೂಚನೆಗೆ ಉತ್ತರಿಸಿದ ಸಚಿವರು, ‘ಕೊಪ್ಪಳದಲ್ಲಿ ಜಿಲ್ಲಾ ಖನಿಜ ನಿಧಿ ಹಣವನ್ನು ಬಳಸಿಕೊಂಡು ಪ್ರಾಯೋಗಿಕವಾಗಿ 20 ಕೃಷಿ ಸಂಜೀವಿನಿ ವಾಹನಗಳನ್ನು ಸೇವೆಗೆ ಒದಗಿಸಲಾಗಿತ್ತು. ಈಗ ಅದನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದರು.

ಮಾರ್ಚ್‌ ಅಂತ್ಯದೊಳಗೆ 100 ವಾಹನಗಳನ್ನು ಖರೀದಿಸಿ, ಸೇವೆಗೆ ಒದಗಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ನಂತರ 64 ವಾಹನ ಖರೀದಿಸಲಾಗುವುದು. ಎರಡನೇ ಹಂತದಲ್ಲಿ ಎಲ್ಲ ರೈತ ಸೇವಾ ಕೇಂದ್ರಗಳಿಗೂ ತಲಾ ಒಂದು ವಾಹನ ಒದಗಿಸಲಾಗುವುದು. ಸಹಾಯವಾಣಿ ಸಂಖ್ಯೆ 155313 ಜತೆ ಅವುಗಳನ್ನು ಜೋಡಿಸಲಾಗುವುದು ಎಂದು ತಿಳಿಸಿದರು.

‘ರಾಜ್ಯದಲ್ಲಿ ನಕಲಿ ಕೀಟನಾಶಕಗಳ ಹಾವಳಿ ಹೆಚ್ಚಾಗಿದೆ. ರೈತರು ಸರಿಯಾದ ಮಾಹಿತಿ ಇಲ್ಲದೇ ಕೀಟನಾಶಕ ಬಳಸಿ ಅಪಾಯಕ್ಕೆ ಸಿಲುಕುತ್ತಿದ್ದಾರೆ. ಕೃಷಿ ಇಲಾಖೆ ಮೂಲಕ ಕೀಟನಾಶಕ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು’ ಎಂದು ಗೋವಿಂದರಾಜು ಆಗ್ರಹಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ್, ‘ಕಳಪೆ ಕೀಟನಾಶಕ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳಲ್ಲಿ 169 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT