ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವಣೆಗೊಂಡಿದ್ದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೆ.ಎಸ್. ಕೃಷ್ಣಾರೆಡ್ಡಿ ಈಗ ಮತ್ತೆ ಅದೇ ಹುದ್ದೆಗೆ ಬಂದಿದ್ದಾರೆ.
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಕೆ–ಶಿಪ್) ಮುಖ್ಯಯೋಜನಾಧಿಕಾರಿಯಾಗಿದ್ದ ಕೃಷ್ಣಾರೆಡ್ಡಿಯವರನ್ನು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ಜೆಡಿಎಸ್–ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಅವರು ಇದೇ ಹುದ್ದೆಯಲ್ಲಿದ್ದರು.
ಪಿಡಬ್ಲ್ಯುಡಿಯ ಕಾರ್ಯದರ್ಶಿಯಾಗಿದ್ದ ಬಿ. ಗುರುಪ್ರಸಾದ್ ಅವರನ್ನು ಕೆ–ಶಿಪ್ ಮುಖ್ಯ ಯೋಜನಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.