<p><strong>ಬೆಂಗಳೂರು:</strong> ಎಲ್ಲ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರ ಸೋಮವಾರ (ನ.15) ರಚಿಸಿರುವ ಉನ್ನತಾಧಿಕಾರ ಸಮಿತಿಗೆ ಕನ್ನಡಿಗರಾಗಿರುವ ಸಂಸ್ಕೃತ ವಿದ್ವಾಂಸ ಚಮೂ ಕೃಷ್ಣಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ.</p>.<p>ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆದಿಲದವರಾದ ಕೃಷ್ಣ ಶಾಸ್ತ್ರಿಗಳು ತಮಿಳುನಾಡಿನ ತಂಜಾವೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರೂ ಆಗಿರುವ ಇವರು, ಸಂಸ್ಕೃತ ಭಾರತಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸಂಸ್ಕೃತ ಸಂವರ್ಧನೆಗಾಗಿ ‘ಸಂಸ್ಕೃತ ಸಂವರ್ಧನಾ ಪ್ರತಿಷ್ಠಾನ’ ಸ್ಥಾಪಿಸಿದ್ದಾರೆ.</p>.<p>ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪಸಂಖ್ಯಾತ, ಬುಡಕಟ್ಟು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಅಧ್ಯಯನ ನಡೆಸಿ, ಅವುಗಳ ಉನ್ನತಿಗಾಗಿ ಕೆಲಸ ಮಾಡಲು ಉನ್ನತಾಧಿಕಾರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.</p>.<p>ಈ ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಭಾಷಾಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಡೆಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾಸಂಬಂಧಿತ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಲ್ಲ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರ ಸೋಮವಾರ (ನ.15) ರಚಿಸಿರುವ ಉನ್ನತಾಧಿಕಾರ ಸಮಿತಿಗೆ ಕನ್ನಡಿಗರಾಗಿರುವ ಸಂಸ್ಕೃತ ವಿದ್ವಾಂಸ ಚಮೂ ಕೃಷ್ಣಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ.</p>.<p>ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆದಿಲದವರಾದ ಕೃಷ್ಣ ಶಾಸ್ತ್ರಿಗಳು ತಮಿಳುನಾಡಿನ ತಂಜಾವೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರೂ ಆಗಿರುವ ಇವರು, ಸಂಸ್ಕೃತ ಭಾರತಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸಂಸ್ಕೃತ ಸಂವರ್ಧನೆಗಾಗಿ ‘ಸಂಸ್ಕೃತ ಸಂವರ್ಧನಾ ಪ್ರತಿಷ್ಠಾನ’ ಸ್ಥಾಪಿಸಿದ್ದಾರೆ.</p>.<p>ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪಸಂಖ್ಯಾತ, ಬುಡಕಟ್ಟು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಅಧ್ಯಯನ ನಡೆಸಿ, ಅವುಗಳ ಉನ್ನತಿಗಾಗಿ ಕೆಲಸ ಮಾಡಲು ಉನ್ನತಾಧಿಕಾರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.</p>.<p>ಈ ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಭಾಷಾಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಡೆಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾಸಂಬಂಧಿತ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>