ಪ್ರಣಾಳಿಕೆಯಲ್ಲಿ ಏನಿದೆ?: ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಾರ್ಷಿಕ ₹15,000 ನೆರವು, ಐದು ಎಕರೆವರೆಗೆ ಜಮೀನು ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ಕೊಳವೆ ಬಾವಿ ಒದಗಿಸುವುದು, ವಸತಿ ರಹಿತ ಕುಟುಂಬಗಳಿಗೆ ಹೆಣ್ಣುಮಕ್ಕಳ ಹೆಸರಿನಲ್ಲಿ 2ಬಿಎಚ್ಕೆ ಮನೆ, ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೂ ಉಚಿತ ಶಿಕ್ಷಣ ಸೇರಿದಂತೆ ಹಲವು ಭರವಸೆಗಳನ್ನು ಕೆಆರ್ಪಿಪಿ ಪ್ರಣಾಳಿಕೆಯಲ್ಲಿ ನೀಡಲಾಗಿದೆ.