ವ್ಯಾಪಾರಿಗಳಿಗೂ ನಷ್ಟ: ಕೆಆರ್ಎಸ್ನ ಬೃಂದಾವನದಲ್ಲಿ ಪ್ರವಾಸಿಗರನ್ನೇ ನೆಚ್ಚಿಕೊಂಡಿರುವ ನೂರಾರು ವ್ಯಾಪಾರಿಗಳು ಈಗ ಅವರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹಣ್ಣಿನ ಅಂಗಡಿ, ತಂಪು ಪಾನೀಯ, ಕರಕುಶಲ ವಸ್ತು ಮಾರಾಟ ಸೇರಿದಂತೆ ನೂರಾರು ಅಂಗಡಿ ಮುಂಗಟ್ಟುಗಳಿವೆ. ಬೃಂದಾವನದ ಒಳಗಿರುವ ರಾಯಲ್ ಆರ್ಕಿಡ್, ಮಯೂರ ಹೋಟೆಲ್ಗಳು ಕೂಡ ಪ್ರವಾಸಿಗರಿಲ್ಲದೇ ನಷ್ಟ ಅನುಭವಿಸುತ್ತಿವೆ.