‘ನಾವು ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ. ನಾವು ಮೇಕೆದಾಟು ಹೋರಾಟ ಮಾಡಿದಾಗ, ಪಾದಯಾತ್ರೆ ಮಾಡಿದರೆ ನೀರು ಬರುತ್ತಾ ಎಂದು ಪ್ರಶ್ನಿಸಿದ್ದರು. ಜಲಧಾರೆ ಯಾತ್ರೆ ಮಾಡಿದರೆ ನೀರು ಬಂದುಬಿಡುತ್ತಾ? ಬರೀ ಕಣ್ಣೀರು ಹಾಕುತ್ತಾರೆ, ಜನ ಆಶೀರ್ವಾದ ಮಾಡಿದರೆ ಅಧಿಕಾರ ಬರುತ್ತದೆ, ಇಲ್ಲದಿದ್ದರೆ ವಿರೋಧ ಪಕ್ಷದಲ್ಲಿ ಕೂರಬೇಕು. ಇದನ್ನು ಬಿಟ್ಟು ಕಣ್ಣೀರು ಏಕೆ ಹಾಕಬೇಕು’ ಎಂದು ಪ್ರಶ್ನಿಸಿದರು.