‘ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನಿರ್ದೋಷಿ ಎಂದು ತನಿಖೆ ಹೇಳಿದೆ. ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿಯೂ ಮುಖ್ಯಮಂತ್ರಿ ಹೇಳಿದ್ದರು. ಆದರೆ ಸಂಪುಟಕ್ಕೆ ತೆಗೆದುಕೊಳ್ಳಲಿಲ್ಲ. ರಾಜಕೀಯದಲ್ಲಿ ಏನೆಲ್ಲ ಆಗುತ್ತದೆ ಗೊತ್ತಿಲ್ಲ? ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆಂದು ಕನಸು ಬಿದ್ದಿತ್ತಾ? ನನ್ನ ಮೇಲೆ ಆರೋಪ ಬಂದಿದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನನ್ನನ್ನು ಮತ್ತೆ ಮಂತ್ರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಯವರಿಗೆ ನೇರವಾಗಿ ಹೇಳಿದ್ದೇನೆ’ ಎಂದರು.