ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಸೇರ್ಪಡೆ ನಂತರ ಎಸ್ಟಿ ಮೀಸಲಾತಿ ಹೆಚ್ಚಳ: ಈಶ್ವರಪ್ಪ

Last Updated 1 ಅಕ್ಟೋಬರ್ 2020, 11:23 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾಡುಗೊಲ್ಲ, ಸವಿತಾ ಸಮಾಜ, ಕೋಳಿ, ಕುರುಬ ಸಮಾಜದವರು ಸೇರಿದಂತೆ ಹಲವು ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೂ, ಹಿಂದುಳಿದ ವರ್ಗಗಳ ಕೋಟಾದಲ್ಲಿ ಸಿಗುತ್ತಿದ್ದ ಶೇಕಡವಾರು ಮೀಸಲಾತಿಯೇ ಅವರಿಗೆ ದೊರಕಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಒಟ್ಟಾರೆ ಮೀಸಲಾತಿ ಶೇ 50 ದಾಟುವಂತಿಲ್ಲ. ಪರಿಶಿಷ್ಟ ಪಂಗಡದವರಿಗೆ ಶೇ 3ರಷ್ಟಿರುವ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸಲು ವಾಲ್ಮೀಕಿ ಸಮುದಾಯ ಬೇಡಿಕೆ ಇಟ್ಟಿದೆ. ಸರ್ಕಾರ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಿ, ವರದಿ ಸಲ್ಲಿಸುವಂತೆ ಸೂಚಿಸಿದೆ. ವರದಿ ಬಂದ ನಂತರ ಹಿಂದುಳಿದ ವರ್ಗಗಳಿಂದ ಪರಿಶಿಷ್ಟ ಪಂಗಡಕ್ಕೆ ಬರುವ ಹೆಚ್ಚುವರಿ ಜಾತಿಗಳನ್ನು ಪರಿಗಣಿಸಿ ಮೀಸಲಾತಿ ನಿಗದಿ ಮಾಡಲಾಗುವುದು ಎಂದರು.

ಅರ್ಹತೆ ಇರುವ ಎಲ್ಲಾ ವರ್ಗದವರೂ ನ್ಯಾಯಯುತವಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮನವಿ ಮಾಡಿದ್ದಾರೆ. ಕುರುಬ ಸಮಾಜ ಸಹ ಕಾಗಿನೆಲೆ, ಹೊಸದುರ್ಗ ಶ್ರೀಗಳ ನೇತೃತ್ವದಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತಿದೆ. ಅವರ ಹೋರಾಟಕ್ಕೆ ತಮ್ಮ ಬೆಂಬಲವೂ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT