ದೇಶದ ಜನಸಂಖ್ಯೆ ಪ್ರತಿದಿನವೂ ಹೆಚ್ಚಳವಾಗುತ್ತಿದೆ. ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ರಾಜ್ಯಗಳು ಇಂತಹ ವಿಷಯದಲ್ಲಿ ಕೈಜೋಡಿಸಬೇಕಿದೆ. ಕರ್ನಾಟಕದಲ್ಲೂ ಇಂತಹ ಕಾಯ್ದೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಸಮಾಲೋಚನೆ ನಡೆಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು. ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಕರಡು ಮಸೂದೆಯ ಸಾಧಕ–ಬಾಧಕ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದುಎಂದು ಪ್ರತಿಕ್ರಿಯಿಸಿದರು.