‘ರಾಯಣ್ಣ ಹಾಗೂ ಶಿವಾಜಿ ಯಾವ ಜಾತಿಯವರು, ಎಲ್ಲಿ ಹುಟ್ಟಿ ಬೆಳೆದರು ಹಾಗೂ ಅವರ ಭಾಷೆಗಳಾವುದು ಎನ್ನುವುದು ಇಲ್ಲಿ ಮುಖ್ಯವಾಗುವುದಿಲ್ಲ. ಇಬ್ಬರೂ ಜಾತಿ, ಪ್ರಾಂತ್ಯ ಹಾಗೂ ಭಾಷೆ ಎಲ್ಲವನ್ನೂ ಮೀರಿದ ಮಹಾಪುರುಷರು. ಅವರನ್ನು ಗೌರವದಿಂದ ನೋಡಬೇಕು ಎಂಬ ಸಂದೇಶವನ್ನು ಬೆಳಗಾವಿಯಿಂದ ಇಡೀ ದೇಶಕ್ಕೆ ರವಾನಿಸಿರುವುದು ಮಾದರಿಯಾಗಿದೆ. ಇಲ್ಲಿನ ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ. ಕನ್ನಡಿಗರು–ಮರಾಠಿಗರು ಹಾಗೂ ಮಹಾರಾಷ್ಟ್ರ ಮತ್ತು ಕರ್ನಾಟಕ ಎನ್ನುವ ಪ್ರಶ್ನೆ ಇಲ್ಲ. ಎಲ್ಲವನ್ನೂ ಮೀರಿ ರಾಷ್ಟ್ರೀಯತೆಯ ದಿಕ್ಕಿನಲ್ಲಿ ನಿರ್ಧಾರ ಮಾಡಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.