ಬೆಂಗಳೂರು: ‘ಸಿದ್ದರಾಮಯ್ಯ, ಶಿವಕುಮಾರ್ ಕೂಡ ರಾಜ್ಯದ ಆಸ್ತಿ. ಅವರು ಆರೋಗ್ಯವಾಗಿರಬೇಕು ಎಂಬುದು ನಮ್ಮ ಆಸೆ. ಪಾದಯಾತ್ರೆ ನಡೆಸುವ ಮುನ್ನ ಅವರು ತಮ್ಮ ಆರೋಗ್ಯದ ಬಗ್ಗೆ ಚಿಂತಿಸಲಿ’.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ತಡೆಯಲು ವಾರಾಂತ್ಯದ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂಬ ಆರೋಪ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ಇದು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಗ್ಯದ ಕಾರಣದಿಂದ ಪಾದಯಾತ್ರೆ ಮಾಡಬೇಡಿ ಎಂದು ಮನವಿ ಮಾಡಿದ್ದೇವೆ. ಅವರು ಹಟ ಹಿಡಿದರೆ ನಾವು ಏನು ಮಾಡಲು ಸಾಧ್ಯ’ ಎಂದು ಕೇಳಿದರು.
ಕಾಂಗ್ರೆಸ್ ಕ್ಷಮೆ ಕೋರಲಿ:ಪಂಜಾಬ್ನಲ್ಲಿ ದೇಶದ ಪ್ರ ಪ್ರಯಾಣಕ್ಕೆ ಅಡ್ಡಿಪಡಿಸಿ, ಅವಮಾನಿಸಿರುವುದಕ್ಕಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ (ಎಐಸಿಸಿ) ನಾಯಕರು ದೇಶದ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಧ್ವನಿ ಎತ್ತಬೇಕು. ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರೂ ಒತ್ತಾಯಿಸಬೇಕು ಎಂದು ಒತ್ತಾಯಿಸಿದರು.