ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕು ಎಂಬುದು ಬಹುತೇಕರ ಒತ್ತಾಯವಾಗಿದೆ. ಅವರ ಭಾವನೆಗಳಿಗೆ ಬೆಲೆ ನೀಡುವುದು ಸರ್ಕಾರದ ಕರ್ತವ್ಯ. ಆದ್ದರಿಂದ ಅನುಮತಿ ನೀಡಲಾಗುವುದು. ಹಬ್ಬದ ಆಚರಣೆ ಹೇಗಿರಬೇಕು, ಎಷ್ಟು ಜನ ಭಾಗವಹಿಸಬೇಕು, ವಿಧಿಸಬೇಕಾದ ನಿರ್ಬಂಧಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.