‘ಕಳೆದ ಏಪ್ರಿಲ್ 12ರಂದು ನನ್ನ ಪತಿ ಸಾವು ಸಂಭವಿಸಿದೆ. ಈ ಸಾವು ಅನುಮಾನಾಸ್ಪದ ಆಗಿದ್ದರಿಂದ ಏಪ್ರಿಲ್ 13ರಂದು ಉಡುಪಿ ಪೊಲೀಸರಿಗೆ ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ನೀಡಿದ್ದೇನೆ. ಅದಕ್ಕೆ ಮೂಲ ಕಾರಣವೇನು, ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ, ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ನಮ್ಮ ಕುಟುಂಬಕ್ಕೆ ಆತಂಕ ಉಂಟಾಗಿದೆ. ಇದರಲ್ಲಿ ಪ್ರಮುಖ ಆರೋಪಿ ಕೆ.ಎಸ್.ಈಶ್ವರಪ್ಪ ಅವರು ಪ್ರಭಾವಿ ನಾಯಕರಾಗಿದ್ದಾರೆ. ಅವರ ನಿರ್ದೇಶನದಂತೆಯೇ ತನಿಖೆ ನಡೆಯುತ್ತಿದೆ’ ಎಂದು ಅವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.