ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ. ದಳವಾಯಿ, ‘ಕೆಎಸ್ಡಿಎಲ್ ಸಾಬೂನು ಮತ್ತು ಮಾರ್ಜಕ ತಯಾರಿಕೆಗಾಗಿ ರಾಸಾಯನಿಕ ತೈಲದಂತಹ ಕಚ್ಚಾ ವಸ್ತುಗಳನ್ನು ಖಾಸಗಿ ಕಂಪನಿಗಳಿಂದ ಖರೀದಿಸುತ್ತದೆ. ಆದರೆ, ಅರ್ಜಿದಾರ ಕಂಪನಿಗಳು ಒದಗಿಸಿದ್ದ 15 ರಾಸಾಯಯನಿಕ ಮಾದರಿಗಳನ್ನು ಕೆಎಸ್ಡಿಎಲ್ ತಿರಸ್ಕರಿಸಿದೆ. ದುಬಾರಿ ಬೆಲೆಗೆ ಬೇರೆ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಇದರ ಹಿಂದೆ ದುರುದ್ದೇಶವಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಆದ್ದರಿಂದ, ಕೆಎಸ್ಡಿಎಲ್ ತಿರಸ್ಕರಿಸಿರುವ ರಾಸಾಯನಿಕ ಮಾದರಿಯನ್ನು ಐಐಎಸ್ಸಿ ವಿಜ್ಞಾನಿಗಳಿಂದ ಪರೀಕ್ಷೆಗೆ ಒಳಪಡಿಸಲು ಆದೇಶಿಸಬೇಕು’ ಎಂದು ಕೋರಿದರು.