<p><strong>ಬೆಂಗಳೂರು: ‘</strong>ಬಿಜೆಪಿಯಿಂದ ಮಂತ್ರಿಯಾದ ಮಾತ್ರಕ್ಕೆ ದಲಿತ ಅಲ್ಲ ಎಂಬಂತೆ ಸಮುದಾಯ ನೋಡುತ್ತಿದೆ. ಈ ರೀತಿಯ ಮನಸ್ಥಿತಿ ಬದಲಾಗಬೇಕು’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.</p>.<p>ಕರ್ನಾಟಕ ದಲಿತ ಉದ್ದಿಮೆದಾರರ ಸಂಘ ಶನಿವಾರ ಆಯೋಜಿಸಿದ್ದ ದಲಿತ ಉದ್ದಿಮೆದಾರರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘2 ವರ್ಷ 1 ತಿಂಗಳ ಕಾಲ ರಾಜ್ಯದಲ್ಲಿ ಸಮಾಜ ಕಲ್ಯಾಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ವೇಳೆ ದಲಿತ ಸಂಘಟನೆಗಳು ನನ್ನ ಬಳಿ ಬರಲೇ ಇಲ್ಲ. ಬಿಜೆಪಿಯಿಂದ ಮಂತ್ರಿಯಾದ ಕೂಡಲೇ ನಾನು ದಲಿತನಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಮನಸ್ಥಿತಿ ಬದಲಾಗದಿದ್ದರೆ ಸಮುದಾಯದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಈ ಬಗ್ಗೆ ಮುಕ್ತವಾಗಿ ಚರ್ಚೆ ಆಗಬೇಕು.ಇಡೀ ದೇಶದ ದಲಿತರನ್ನು ರಕ್ಷಿಸುವ ಜವಾಬ್ದಾರಿಯುತ ವ್ಯಕ್ತಿ ನಾನು. ದಲಿತ ಹೋರಾಟಗಾರನಾಗಿ ಮಾತನಾಡುವುದು ಹೇಗೆ, ಮಂತ್ರಿಯಾಗಿ ಮಾತನಾಡುವುದು ಹೇಗೆ ಎಂಬುದು ಗೊತ್ತಿದೆ’ ಎಂದರು.</p>.<p>‘ಕೆಲವರು 60 ವರ್ಷಗಳ ಕಾಲ ಈ ಸಮಾಜಕ್ಕೆ ದುಡಿದಿದ್ದೇವೆ ಎಂದು ಹೇಳುತ್ತಾರೆ. ದಲಿತರ ಪರಿಸ್ಥಿತಿ ಬದಲಾಗಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನಗಳೇ ನಡೆದಿಲ್ಲ’ ಎಂದು ಹೇಳಿದರು.</p>.<p>ದಲಿತ ಯುವಕರಿಗೆ ಉದ್ಯಮದಲ್ಲಿ ತೊಡಗಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಉದ್ದಿಮೆದಾರರ ಸಂಘ ಜಿಲ್ಲಾ ಮಟ್ಟದಲ್ಲಿ ವಿಚಾರ ಸಂಕಿರಣಗಳನ್ನು ನಡೆಸಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.</p>.<p>ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಮಾತನಾಡಿ, ‘ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ದಲಿತ ಉದ್ದಿಮೆದಾರರಿಗೂ ಸರ್ಕಾರ ಸಾಲ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಎನ್.ಮಹೇಶ್ ಮಾತನಾಡಿ, ‘ದಲಿತರ ಸ್ಥಿತಿಯನ್ನು ಹಾಗೇ ಉಳಿಸಿ ಈ ದೇಶವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಮೇಲೆತ್ತದ ಹೊರತು ದೇಶದ ಅಭಿವೃದ್ದಿ ಸಾಧ್ಯವಿಲ್ಲ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಹೃದಯವಂತಿಕೆ ಅಧಿಕಾರಿ ವರ್ಗಕ್ಕೂ ಇರಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ನಾಗಾಂಬಿಕಾದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಬಿಜೆಪಿಯಿಂದ ಮಂತ್ರಿಯಾದ ಮಾತ್ರಕ್ಕೆ ದಲಿತ ಅಲ್ಲ ಎಂಬಂತೆ ಸಮುದಾಯ ನೋಡುತ್ತಿದೆ. ಈ ರೀತಿಯ ಮನಸ್ಥಿತಿ ಬದಲಾಗಬೇಕು’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.</p>.<p>ಕರ್ನಾಟಕ ದಲಿತ ಉದ್ದಿಮೆದಾರರ ಸಂಘ ಶನಿವಾರ ಆಯೋಜಿಸಿದ್ದ ದಲಿತ ಉದ್ದಿಮೆದಾರರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘2 ವರ್ಷ 1 ತಿಂಗಳ ಕಾಲ ರಾಜ್ಯದಲ್ಲಿ ಸಮಾಜ ಕಲ್ಯಾಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ವೇಳೆ ದಲಿತ ಸಂಘಟನೆಗಳು ನನ್ನ ಬಳಿ ಬರಲೇ ಇಲ್ಲ. ಬಿಜೆಪಿಯಿಂದ ಮಂತ್ರಿಯಾದ ಕೂಡಲೇ ನಾನು ದಲಿತನಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಮನಸ್ಥಿತಿ ಬದಲಾಗದಿದ್ದರೆ ಸಮುದಾಯದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಈ ಬಗ್ಗೆ ಮುಕ್ತವಾಗಿ ಚರ್ಚೆ ಆಗಬೇಕು.ಇಡೀ ದೇಶದ ದಲಿತರನ್ನು ರಕ್ಷಿಸುವ ಜವಾಬ್ದಾರಿಯುತ ವ್ಯಕ್ತಿ ನಾನು. ದಲಿತ ಹೋರಾಟಗಾರನಾಗಿ ಮಾತನಾಡುವುದು ಹೇಗೆ, ಮಂತ್ರಿಯಾಗಿ ಮಾತನಾಡುವುದು ಹೇಗೆ ಎಂಬುದು ಗೊತ್ತಿದೆ’ ಎಂದರು.</p>.<p>‘ಕೆಲವರು 60 ವರ್ಷಗಳ ಕಾಲ ಈ ಸಮಾಜಕ್ಕೆ ದುಡಿದಿದ್ದೇವೆ ಎಂದು ಹೇಳುತ್ತಾರೆ. ದಲಿತರ ಪರಿಸ್ಥಿತಿ ಬದಲಾಗಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನಗಳೇ ನಡೆದಿಲ್ಲ’ ಎಂದು ಹೇಳಿದರು.</p>.<p>ದಲಿತ ಯುವಕರಿಗೆ ಉದ್ಯಮದಲ್ಲಿ ತೊಡಗಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಉದ್ದಿಮೆದಾರರ ಸಂಘ ಜಿಲ್ಲಾ ಮಟ್ಟದಲ್ಲಿ ವಿಚಾರ ಸಂಕಿರಣಗಳನ್ನು ನಡೆಸಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.</p>.<p>ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಮಾತನಾಡಿ, ‘ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ದಲಿತ ಉದ್ದಿಮೆದಾರರಿಗೂ ಸರ್ಕಾರ ಸಾಲ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಎನ್.ಮಹೇಶ್ ಮಾತನಾಡಿ, ‘ದಲಿತರ ಸ್ಥಿತಿಯನ್ನು ಹಾಗೇ ಉಳಿಸಿ ಈ ದೇಶವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಮೇಲೆತ್ತದ ಹೊರತು ದೇಶದ ಅಭಿವೃದ್ದಿ ಸಾಧ್ಯವಿಲ್ಲ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಹೃದಯವಂತಿಕೆ ಅಧಿಕಾರಿ ವರ್ಗಕ್ಕೂ ಇರಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ನಾಗಾಂಬಿಕಾದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>