ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳನೇ ವೇತನ ಆಯೋಗಕ್ಕೆ ಆಗ್ರಹಿಸಿ ಹೋರಾಟ: ಸರ್ಕಾರಿ ನೌಕರರ ಸಂಘ

Last Updated 11 ಅಕ್ಟೋಬರ್ 2021, 16:40 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗವನ್ನು ತ್ವರಿತವಾಗಿ ರಚಿಸುವಂತೆ ಆಗ್ರಹಿಸಿ ಹೋರಾಟ ಕೈಗೆತ್ತಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.

ಭಾನುವಾರ ನಡೆದ ಸಂಘದ ರಾಜ್ಯ ಪರಿಷತ್‌ ಮಹಾಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಹಳೆಯ ಪಿಂಚಣಿ ಯೋಜನೆಯ ಮರು ಜಾರಿ, ಖಾಲಿ ಇರುವ 2.63 ಲಕ್ಷ ಹುದ್ದೆಗಳ ಭರ್ತಿ, ಶಿಕ್ಷಕರ ವರ್ಗಾವಣೆಗೆ ಕಾಯ್ದೆ ಜಾರಿ, ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಸೇರಿದಂತೆ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೂರು ಹಂತದ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು. ಡಿಸೆಂಬರ್‌ನಲ್ಲಿ ಮನವಿ ತಹಶೀಲ್ದಾರ್‌ಗಳ ಮೂಲಕ ಮನವಿ ಸಲ್ಲಿಸಲಾಗುವುದು. 2022ರ ಜನವರಿಯಲ್ಲಿ ಮೂರು ದಿನಗಳ ಕಾಲ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ, ನಂತರವೂ ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT