<p><strong>ಬೆಂಗಳೂರು</strong>: ‘ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್ಒಯು) 2023ನೇ ಸಾಲಿಗೆ 1 ಲಕ್ಷ ವಿದ್ಯಾರ್ಥಿಗಳ ಪ್ರವೇಶ ಗುರಿಹೊಂದಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಕೆಎಸ್ಒಯುನಲ್ಲಿ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ಮೂಲಕ ಬೆಂಗಳೂರಿನಿಂದ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಪ್ರಸಕ್ತ ಸಾಲಿನಲ್ಲಿ 17,244 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 2022ಕ್ಕೆ ಸಾಲಿನಿಂದ ಈ ಸಂಖ್ಯೆ 50 ಸಾವಿರ ಹಾಗೂ ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇರಬೇಕು’ ಎಂದು ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.</p>.<p>‘ದೂರ ಶಿಕ್ಷಣವನ್ನು ಕೆಎಸ್ಒಯು ಮಾತ್ರ ನೀಡಬೇಕೆಂಬ ಕಾಯ್ದೆ ತರಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ ಮೇಲೆ ದೂರಶಿಕ್ಷಣಕ್ಕೆ ಯಾವುದೇ ಗಡಿಗಳು ಇರುವುದಿಲ್ಲ. ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಬೆಳೆಯಲು ಅವಕಾಶವಿದೆ. ಈಗಾಗಲೇ ಈ ಶಿಕ್ಷಣ ಕಾಟಾಚಾರಕ್ಕಲ್ಲ, ಗಂಭೀರವಾಗಿ ಕಲಿಯಬೇಕು. ಯಾವ ಉದ್ದೇಶಕ್ಕಾಗಿ ಈ ವಿಶ್ವವಿದ್ಯಾಲಯ ಸ್ಥಾಪನೆ ಆಗಿತ್ತೊ ಅದೇ ದಿಕ್ಕಿನಲ್ಲಿ ಮುನ್ನಡೆಸಲಾಗುವುದು. ಅದಕ್ಕಾಗಿ ಸರ್ಕಾರ ಎಲ್ಲ ಸಹಕಾರ ನೀಡಲಿದೆ’ ಎಂದರು.</p>.<p>‘ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ವ್ಯಾಪಕವಾದ ಪ್ರಚಾರ ಕೈಗೊಳ್ಳಬೇಕು. ಸಾಧ್ಯವಾದರೆ ತಾರಾ ಪ್ರಚಾರಕರಿಂದ ದೃಶ್ಯ ರೂಪದ ಜಾಹೀರಾತು ಸಿದ್ಧಪಡಿಸಿ ಪ್ರಚಾರ ಮಾಡಿ, ವಿಶೇಷ ಅಭಿಯಾನ ಮಾಡಿ. ಆ ಮೂಲಕ,ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೂಒಳ್ಳೆಯ ಶೈಕ್ಷಣಿಕ ಬ್ರ್ಯಾಂಡ್ ಆಗಿ ಹೊರಹೊಮ್ಮಲಿ. ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಇತರೆ ವಿಶ್ವವಿದ್ಯಾಲಯಗಳು, ಜಿಟಿಟಿಸಿ ಮುಂತಾದ ಶೈಕ್ಷಣಿಕ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಿ’ ಎಂದು ಅಶ್ವತ್ಥನಾರಾಯಣ ಸಲಹೆ ಮಾಡಿದರು.</p>.<p>ಕುಲಸಚಿವ ಡಾ.ಲಿಂಗರಾಜ ಗಾಂಧಿ, ಮೌಲ್ಯಮಾಪನ ಕುಲಸಚಿವ ಅಶೋಕ ಕಾಂಬ್ಳೆ, ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಮೈಸೂರಿನಿಂದಲೇ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್ಒಯು) 2023ನೇ ಸಾಲಿಗೆ 1 ಲಕ್ಷ ವಿದ್ಯಾರ್ಥಿಗಳ ಪ್ರವೇಶ ಗುರಿಹೊಂದಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಕೆಎಸ್ಒಯುನಲ್ಲಿ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ಮೂಲಕ ಬೆಂಗಳೂರಿನಿಂದ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಪ್ರಸಕ್ತ ಸಾಲಿನಲ್ಲಿ 17,244 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 2022ಕ್ಕೆ ಸಾಲಿನಿಂದ ಈ ಸಂಖ್ಯೆ 50 ಸಾವಿರ ಹಾಗೂ ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇರಬೇಕು’ ಎಂದು ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.</p>.<p>‘ದೂರ ಶಿಕ್ಷಣವನ್ನು ಕೆಎಸ್ಒಯು ಮಾತ್ರ ನೀಡಬೇಕೆಂಬ ಕಾಯ್ದೆ ತರಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ ಮೇಲೆ ದೂರಶಿಕ್ಷಣಕ್ಕೆ ಯಾವುದೇ ಗಡಿಗಳು ಇರುವುದಿಲ್ಲ. ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಬೆಳೆಯಲು ಅವಕಾಶವಿದೆ. ಈಗಾಗಲೇ ಈ ಶಿಕ್ಷಣ ಕಾಟಾಚಾರಕ್ಕಲ್ಲ, ಗಂಭೀರವಾಗಿ ಕಲಿಯಬೇಕು. ಯಾವ ಉದ್ದೇಶಕ್ಕಾಗಿ ಈ ವಿಶ್ವವಿದ್ಯಾಲಯ ಸ್ಥಾಪನೆ ಆಗಿತ್ತೊ ಅದೇ ದಿಕ್ಕಿನಲ್ಲಿ ಮುನ್ನಡೆಸಲಾಗುವುದು. ಅದಕ್ಕಾಗಿ ಸರ್ಕಾರ ಎಲ್ಲ ಸಹಕಾರ ನೀಡಲಿದೆ’ ಎಂದರು.</p>.<p>‘ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ವ್ಯಾಪಕವಾದ ಪ್ರಚಾರ ಕೈಗೊಳ್ಳಬೇಕು. ಸಾಧ್ಯವಾದರೆ ತಾರಾ ಪ್ರಚಾರಕರಿಂದ ದೃಶ್ಯ ರೂಪದ ಜಾಹೀರಾತು ಸಿದ್ಧಪಡಿಸಿ ಪ್ರಚಾರ ಮಾಡಿ, ವಿಶೇಷ ಅಭಿಯಾನ ಮಾಡಿ. ಆ ಮೂಲಕ,ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೂಒಳ್ಳೆಯ ಶೈಕ್ಷಣಿಕ ಬ್ರ್ಯಾಂಡ್ ಆಗಿ ಹೊರಹೊಮ್ಮಲಿ. ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಇತರೆ ವಿಶ್ವವಿದ್ಯಾಲಯಗಳು, ಜಿಟಿಟಿಸಿ ಮುಂತಾದ ಶೈಕ್ಷಣಿಕ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಿ’ ಎಂದು ಅಶ್ವತ್ಥನಾರಾಯಣ ಸಲಹೆ ಮಾಡಿದರು.</p>.<p>ಕುಲಸಚಿವ ಡಾ.ಲಿಂಗರಾಜ ಗಾಂಧಿ, ಮೌಲ್ಯಮಾಪನ ಕುಲಸಚಿವ ಅಶೋಕ ಕಾಂಬ್ಳೆ, ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಮೈಸೂರಿನಿಂದಲೇ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>