‘ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ವ್ಯಾಪಕವಾದ ಪ್ರಚಾರ ಕೈಗೊಳ್ಳಬೇಕು. ಸಾಧ್ಯವಾದರೆ ತಾರಾ ಪ್ರಚಾರಕರಿಂದ ದೃಶ್ಯ ರೂಪದ ಜಾಹೀರಾತು ಸಿದ್ಧಪಡಿಸಿ ಪ್ರಚಾರ ಮಾಡಿ, ವಿಶೇಷ ಅಭಿಯಾನ ಮಾಡಿ. ಆ ಮೂಲಕ,ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೂಒಳ್ಳೆಯ ಶೈಕ್ಷಣಿಕ ಬ್ರ್ಯಾಂಡ್ ಆಗಿ ಹೊರಹೊಮ್ಮಲಿ. ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಇತರೆ ವಿಶ್ವವಿದ್ಯಾಲಯಗಳು, ಜಿಟಿಟಿಸಿ ಮುಂತಾದ ಶೈಕ್ಷಣಿಕ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಿ’ ಎಂದು ಅಶ್ವತ್ಥನಾರಾಯಣ ಸಲಹೆ ಮಾಡಿದರು.