ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ (ಕೆಎಸ್ಒಯು) 2012–13 ಮತ್ತು 2013–14ನೇ ಸಾಲಿನಲ್ಲಿ ಪರೀಕ್ಷೆ ತೆಗೆದುಕೊಂಡ 75 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಈವರೆಗೆ ಪ್ರಮಾಣಪತ್ರವನ್ನೇ ವಿತರಿಸಿಲ್ಲ. ಈ ಸಾಲಿನಲ್ಲಿ ಪರೀಕ್ಷೆ ಬರೆದವರ ಪೈಕಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕಿ ಉಮಾಶ್ರೀ ಅವರಂತಹ ಗಣ್ಯರೂ ಇರುವುದು ವಿಶೇಷ.