ಇದೇ ಸಂದರ್ಭದಲ್ಲಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ, ಜ್ಞಾಪನಾ ಪತ್ರ ಹಾಗೂ ಸುತ್ತೋಲೆಗಳ ಸಂಗ್ರಹದ ಪುಸ್ತಕ ಮತ್ತು ಪರಿಸರ ವಾಹಿನಿ ಪತ್ರಿಕೆಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಅರಣ್ಯ ಸಚಿವ ಆನಂದ್ ಸಿಂಗ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ ಇದ್ದರು.