ಪರೀಕ್ಷಾ ಕೇಂದ್ರಕ್ಕೆ ಸುತ್ತಮುತ್ತಲ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಿಂದ ಪರೀಕ್ಷೆ ದಿನ ಮತ್ತು ಪರೀಕ್ಷೆಯ ಹಿಂದಿನ ದಿನಬಸ್ಗಳು ಕಾರ್ಯಾಚರಣೆ ಮಾಡಲಿವೆ.ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಂದ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ,ಚಿತ್ರದುರ್ಗದಿಂದ ದಾವಣೆಗೆರೆ, ಉಡುಪಿಯಿಂದ ಮಂಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡುಗು ಜಿಲ್ಲೆಗಳಿಂದ ಮೈಸೂರಿಗೆ, ಚಿಕ್ಕಮಗಳೂರು ಜಿಲ್ಲೆಯಿಂದ ಶಿವಮೊಗ್ಗಕ್ಕೆ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ಗಳು ಸಂಚರಿಸಲಿವೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.