<p><strong>ಬೆಂಗಳೂರು:</strong> ನ್ಯಾಯಸಮ್ಮತವಾದ ನಿವೃತ್ತಿ ವೇತನ ನೀಡುವಂತೆ ಒತ್ತಾಯಿಸಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯ ನಿವೃತ್ತ ನೌಕರರು ಮೌರ್ಯ ವೃತ್ತದಲ್ಲಿ ಧರಣಿ ನಡೆಸಿದರು.</p>.<p>‘ನ್ಯಾಯಾಲಯವು ನ್ಯಾಯಸಮ್ಮತ ನಿವೃತ್ತಿ ವೇತನ ನೀಡುವಂತೆ ನಿರ್ದೇಶನ ನೀಡಿ ನಾಲ್ಕು ವರ್ಷ ಕಳೆದಿದ್ದರೂ ಭವಿಷ್ಯ ನಿಧಿ ಪ್ರಾಧಿಕಾರವು ನಿವೃತ್ತಿ ವೇತನ ಹೆಚ್ಚಿಸದ ಕಾರಣ ನಾವು ಧರಣಿ ನಡೆಸಬೇಕಾಯಿತು’ ಎಂದು ಬಿಎಂಟಿಸಿ-ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ತೀರ್ಪಿಗೆ ಅಡ್ಡಿಪಡಿಸುತ್ತಿದೆ. ತೀರ್ಪು ಪ್ರಕಟವಾಗದೆ, ನಿವೃತ್ತರಿಗೆ ಸೂಕ್ತ ನಿವೃತ್ತಿ ವೇತನ ಕೈಸೇರಲು ಸಾಧ್ಯವಾಗುತ್ತಿಲ್ಲ.ಈಗಾಗಲೇ ನೂರಾರು ಮಂದಿ ನಿವೃತ್ತ ನೌಕರರು ಮರಣ ಹೊಂದಿದ್ದಾರೆ. ಈಗಿನ ನಿವೃತ್ತಿ ವೇತನ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನ್ಯಾಯಸಮ್ಮತವಾದ ನಿವೃತ್ತಿ ವೇತನ ನೀಡುವಂತೆ ಒತ್ತಾಯಿಸಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯ ನಿವೃತ್ತ ನೌಕರರು ಮೌರ್ಯ ವೃತ್ತದಲ್ಲಿ ಧರಣಿ ನಡೆಸಿದರು.</p>.<p>‘ನ್ಯಾಯಾಲಯವು ನ್ಯಾಯಸಮ್ಮತ ನಿವೃತ್ತಿ ವೇತನ ನೀಡುವಂತೆ ನಿರ್ದೇಶನ ನೀಡಿ ನಾಲ್ಕು ವರ್ಷ ಕಳೆದಿದ್ದರೂ ಭವಿಷ್ಯ ನಿಧಿ ಪ್ರಾಧಿಕಾರವು ನಿವೃತ್ತಿ ವೇತನ ಹೆಚ್ಚಿಸದ ಕಾರಣ ನಾವು ಧರಣಿ ನಡೆಸಬೇಕಾಯಿತು’ ಎಂದು ಬಿಎಂಟಿಸಿ-ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ತೀರ್ಪಿಗೆ ಅಡ್ಡಿಪಡಿಸುತ್ತಿದೆ. ತೀರ್ಪು ಪ್ರಕಟವಾಗದೆ, ನಿವೃತ್ತರಿಗೆ ಸೂಕ್ತ ನಿವೃತ್ತಿ ವೇತನ ಕೈಸೇರಲು ಸಾಧ್ಯವಾಗುತ್ತಿಲ್ಲ.ಈಗಾಗಲೇ ನೂರಾರು ಮಂದಿ ನಿವೃತ್ತ ನೌಕರರು ಮರಣ ಹೊಂದಿದ್ದಾರೆ. ಈಗಿನ ನಿವೃತ್ತಿ ವೇತನ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>