'ಆದಾಯದಲ್ಲಿ ಶೇ 85ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಸೇರಿದಂತೆ ಇತರ ಯೋಜನೇತರ ವೆಚ್ಚಗಳಿಗೆ ಖರ್ಚಾಗುತ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9:ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ದರೆ ಹೇಳಿ, ಸರಿಪಡಿಸೋಣ. ಅದನ್ನು ಬಿಟ್ಟು ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡುವುದು ಸರಿಯಲ್ಲ' ಎಂದರು.