‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ನೀಡಬೇಕು. ಸಂಸ್ಥೆಯಲ್ಲಿ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿಯನ್ನು ಕೈಬಿಟ್ಟು, ಇತರೆ ಇಲಾಖೆಗಳ ಮತ್ತು ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.