<p><strong>ಬೆಂಗಳೂರು:</strong> ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಅಂತರ ಕಾಯ್ದುಕೊಂಡು ಪ್ರಯಾಣ ಮಾಡಬೇಕು ಎಂಬ ನಿರ್ಬಂಧವನ್ನು ಸರ್ಕಾರ ತೆಗೆದು ಹಾಕಿದ್ದು, ಇರುವ ಎಲ್ಲಾ ಸೀಟುಗಳಲ್ಲೂ ಕುಳಿತು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.</p>.<p>ಈ ಹಿಂದೆ ಸಾಮಾನ್ಯ ಬಸ್ಗಳಲ್ಲಿ (ಕೆಂಪು ಬಸ್) 30 ಜನರ ಪ್ರಯಾಣಕ್ಕೆ ಮಾತ್ರ ಅವಕಾಶ ಇತ್ತು.ಈಗಎಲ್ಲಾ ಸೀಟುಗಳಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>‘ಬಸ್ನಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ಮುಖಗವಸು ಕಡ್ಡಾಯವಾಗಿ ಧರಿಸಬೇಕು, ಪ್ರತಿ ಪ್ರಯಾಣದ ನಂತರ ಬಸ್ ಸ್ಯಾನಿಟೈಸ್ ಮಾಡಬೇಕು’ ಎಂದು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.</p>.<p>ಎಲ್ಲಾ ಪ್ರಯಾಣಿಕರ ಹೆಸರು, ದೂರವಾಣಿ ಸಂಖ್ಯೆ ಪಡೆಯಲಾಗುತ್ತಿತ್ತು. ಕೆಲ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಉಷ್ಣಾಂಶ ಪರಿಶೀಲನೆ ನಡೆಸಲಾಗುತ್ತಿತ್ತು. ಈ ಪ್ರಕ್ರಿಯೆ ಇನ್ನು ಮುಂದುವರಿಯುವುದಿಲ್ಲ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಎಲ್ಲಾ ಬಸ್ಗಳ ಕಾರ್ಯಾಚರಣೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ.ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿಬಸ್ ಕಾರ್ಯಾಚರಣೆ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಅವರು ಹೇಳಿದರು.</p>.<p class="Briefhead"><strong>ವೇತನಕ್ಕೆ ₹423 ಕೋಟಿ</strong></p>.<p>ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ವೇತನಕ್ಕಾಗಿ ರಾಜ್ಯ ಸರ್ಕಾರ ₹423 ಕೋಟಿ ಬಿಡುಗಡೆ ಮಾಡಿದೆ.</p>.<p>ಕೆಎಸ್ಆರ್ಟಿಸಿಗೆ ₹135 ಕೋಟಿ, ಬಿಎಂಟಿಸಿಗೆ ₹121 ಕೋಟಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ₹87 ಕೋಟಿ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ₹80 ಕೋಟಿ ಅನುದಾನ ಹಂಚಿಕೆ ಮಾಡಿಆದೇಶ ಹೊರಡಿಸಿದೆ.</p>.<p>‘ಈ ಅನುದಾನವನ್ನು ಮೂಲ ವೇತನ, ತುಟ್ಟಿಭತ್ಯೆ ಸೇರಿ ಶೇ 75ರಷ್ಟು ವೇತನ ವೆಚ್ಚ ಭರಿಸಿಕೊಳ್ಳಬೇಕು. ಉಳಿದ ಶೇ 25ರಷ್ಟನ್ನು ಸಂಸ್ಥೆಗಳ ಸಂಪನ್ಮೂಲದಿಂದ ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಅಂತರ ಕಾಯ್ದುಕೊಂಡು ಪ್ರಯಾಣ ಮಾಡಬೇಕು ಎಂಬ ನಿರ್ಬಂಧವನ್ನು ಸರ್ಕಾರ ತೆಗೆದು ಹಾಕಿದ್ದು, ಇರುವ ಎಲ್ಲಾ ಸೀಟುಗಳಲ್ಲೂ ಕುಳಿತು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.</p>.<p>ಈ ಹಿಂದೆ ಸಾಮಾನ್ಯ ಬಸ್ಗಳಲ್ಲಿ (ಕೆಂಪು ಬಸ್) 30 ಜನರ ಪ್ರಯಾಣಕ್ಕೆ ಮಾತ್ರ ಅವಕಾಶ ಇತ್ತು.ಈಗಎಲ್ಲಾ ಸೀಟುಗಳಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>‘ಬಸ್ನಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ಮುಖಗವಸು ಕಡ್ಡಾಯವಾಗಿ ಧರಿಸಬೇಕು, ಪ್ರತಿ ಪ್ರಯಾಣದ ನಂತರ ಬಸ್ ಸ್ಯಾನಿಟೈಸ್ ಮಾಡಬೇಕು’ ಎಂದು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.</p>.<p>ಎಲ್ಲಾ ಪ್ರಯಾಣಿಕರ ಹೆಸರು, ದೂರವಾಣಿ ಸಂಖ್ಯೆ ಪಡೆಯಲಾಗುತ್ತಿತ್ತು. ಕೆಲ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಉಷ್ಣಾಂಶ ಪರಿಶೀಲನೆ ನಡೆಸಲಾಗುತ್ತಿತ್ತು. ಈ ಪ್ರಕ್ರಿಯೆ ಇನ್ನು ಮುಂದುವರಿಯುವುದಿಲ್ಲ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಎಲ್ಲಾ ಬಸ್ಗಳ ಕಾರ್ಯಾಚರಣೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ.ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿಬಸ್ ಕಾರ್ಯಾಚರಣೆ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಅವರು ಹೇಳಿದರು.</p>.<p class="Briefhead"><strong>ವೇತನಕ್ಕೆ ₹423 ಕೋಟಿ</strong></p>.<p>ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ವೇತನಕ್ಕಾಗಿ ರಾಜ್ಯ ಸರ್ಕಾರ ₹423 ಕೋಟಿ ಬಿಡುಗಡೆ ಮಾಡಿದೆ.</p>.<p>ಕೆಎಸ್ಆರ್ಟಿಸಿಗೆ ₹135 ಕೋಟಿ, ಬಿಎಂಟಿಸಿಗೆ ₹121 ಕೋಟಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ₹87 ಕೋಟಿ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ₹80 ಕೋಟಿ ಅನುದಾನ ಹಂಚಿಕೆ ಮಾಡಿಆದೇಶ ಹೊರಡಿಸಿದೆ.</p>.<p>‘ಈ ಅನುದಾನವನ್ನು ಮೂಲ ವೇತನ, ತುಟ್ಟಿಭತ್ಯೆ ಸೇರಿ ಶೇ 75ರಷ್ಟು ವೇತನ ವೆಚ್ಚ ಭರಿಸಿಕೊಳ್ಳಬೇಕು. ಉಳಿದ ಶೇ 25ರಷ್ಟನ್ನು ಸಂಸ್ಥೆಗಳ ಸಂಪನ್ಮೂಲದಿಂದ ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>