ರಾಯಚೂರಿನಿಂದ ದೇವದುರ್ಗ ಲಿಂಗಸುಗೂರು, ಮಾನ್ವಿ, ಸಿಂಧನೂರು ಸೇರಿದಂತೆ ಜಿಲ್ಲೆಯಾದ್ಯಂತ ಬಸ್ಸುಗಳು ಸಂಚರಿಸುತ್ತಿವೆ. ಅಲ್ಲದೆ ನೆರೆಯ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಬಸ್ಸು ಸಂಚಾರ ಆರಂಭಿಸಿವೆ.
ಹೈಕೋರ್ಟ್ ಸಲಹೆ ಆಧರಿಸಿ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಸಂಜೆ ಹೊತ್ತಿಗೆ ಹಾಜರಾತಿ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಸದ್ಯ ಶೇ 30 ರಷ್ಟು ನೌಕರರು ಬಂದಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.