<p><strong>ಬೆಂಗಳೂರು</strong>: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳಸಾರಿಗೆ ಸುರಕ್ಷಾ ಸಂಚಾರಿ ಬಸ್ಗಳನ್ನು ಕೆಎಸ್ಆರ್ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು.</p>.<p>ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್ಗಳನ್ನು ಆಮ್ಲಜನಕ ಸಹಿತ ಸಂಚಾರಿ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಇವುಗಳಲ್ಲಿ ಎರಡು ಬಸ್ಗಳನ್ನು ಆಂಬುಲೆನ್ಸ್ ಮಾದರಿಯಲ್ಲಿ ಪರಿವರ್ತಿಸಿ ಉಪಕರಣಗಳನ್ನು ಅಳವಡಿಸಲಾಗಿದೆ. ತಲಾ ₹10 ಲಕ್ಷ ವೆಚ್ಚವಾಗಿದ್ದು, ನಿಗಮವೇ ವೆಚ್ಚ ಭರಿಸಿಕೊಂಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು. </p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಸ್ಗಳನ್ನು ಈ ರೀತಿ ಪರಿವರ್ತಿಸಲಾಗುತ್ತಿದೆ. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸಲು ಖಾಸಗಿ ಸಹಭಾಗತ್ವ ದೊರೆತರೆ ಎಲ್ಲ ಜಿಲ್ಲೆಗಳಲ್ಲಿಯೂ ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಬಸ್ಗಳನ್ನು ಒದಗಿಸಲು ಎಲ್ಲ ನಿಗಮಗಳಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ಜತೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು.</p>.<p>‘ಕೋವಿಡ್ ಸೋಂಕು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಜಾಗ ಇಲ್ಲದಿದ್ದಾಗ ತಕ್ಷಣಕ್ಕೆ ಅವರಿಗೆ ಆಮ್ಲಜನಕ ನೀಡಲು ಈ ಬಸ್ಗಳು ಸಂಜೀವಿನಿಯಂತೆ ಉಪಕಾರಿ ಆಗಲಿವೆ. ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಯ ಬಸ್ಗಳು ಅಗತ್ಯವಿದ್ದರೆ ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳಸಾರಿಗೆ ಸುರಕ್ಷಾ ಸಂಚಾರಿ ಬಸ್ಗಳನ್ನು ಕೆಎಸ್ಆರ್ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು.</p>.<p>ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್ಗಳನ್ನು ಆಮ್ಲಜನಕ ಸಹಿತ ಸಂಚಾರಿ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಇವುಗಳಲ್ಲಿ ಎರಡು ಬಸ್ಗಳನ್ನು ಆಂಬುಲೆನ್ಸ್ ಮಾದರಿಯಲ್ಲಿ ಪರಿವರ್ತಿಸಿ ಉಪಕರಣಗಳನ್ನು ಅಳವಡಿಸಲಾಗಿದೆ. ತಲಾ ₹10 ಲಕ್ಷ ವೆಚ್ಚವಾಗಿದ್ದು, ನಿಗಮವೇ ವೆಚ್ಚ ಭರಿಸಿಕೊಂಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು. </p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಸ್ಗಳನ್ನು ಈ ರೀತಿ ಪರಿವರ್ತಿಸಲಾಗುತ್ತಿದೆ. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸಲು ಖಾಸಗಿ ಸಹಭಾಗತ್ವ ದೊರೆತರೆ ಎಲ್ಲ ಜಿಲ್ಲೆಗಳಲ್ಲಿಯೂ ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಬಸ್ಗಳನ್ನು ಒದಗಿಸಲು ಎಲ್ಲ ನಿಗಮಗಳಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ಜತೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು.</p>.<p>‘ಕೋವಿಡ್ ಸೋಂಕು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಜಾಗ ಇಲ್ಲದಿದ್ದಾಗ ತಕ್ಷಣಕ್ಕೆ ಅವರಿಗೆ ಆಮ್ಲಜನಕ ನೀಡಲು ಈ ಬಸ್ಗಳು ಸಂಜೀವಿನಿಯಂತೆ ಉಪಕಾರಿ ಆಗಲಿವೆ. ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಯ ಬಸ್ಗಳು ಅಗತ್ಯವಿದ್ದರೆ ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>