<p><strong>ಬೆಂಗಳೂರು</strong>: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಆದರೆಕ, ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಸ್ಪಷ್ಟಪಡಿಸಿವೆ.</p>.<p>‘ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರು ಧರಣಿ ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳ ಪ್ರತಿನಿಧಿಗಳು ಧರಣಿ ನಡೆಸಲಿದ್ದಾರೆ. ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಾರ್ವನಿಕರಿಗೆ ತೊಂದರೆ ನೀಡುವ ಉದ್ದೇಶ ಇಲ್ಲ. ಮೊದಲ ಹಂತದಲ್ಲಿ ಸಾಂಕೇತಿಕ ಧರಣಿಯನ್ನಷ್ಟೇ ನಡೆಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘14 ಬೇಡಿಕೆಗಳನ್ನು ಮುಂದಿಟ್ಟು ಆರು ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಹೋರಾಟ ನಡೆಸುತ್ತಿದ್ದೇವೆ. ವೇತನ ಹೆಚ್ಚಳ ಒಪ್ಪಂದ 2020ರ ಜ.1ರಿಂದ ಬಾಕಿ ಉಳಿದಿದೆ. ಮೂರು ವರ್ಷಗಳಿಂದ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸಲು ಮುಂದಾಗಿದ್ದೇವೆ’ ಎಂದು ಹೇಳಿದರು.</p>.<p>‘ಪ್ರತಿಭಟನೆಯಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ. ಎಂದಿನಂತೆ ಸಂಚಾರಿಸಲಿವೆ’ ಎಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸ್ಪಷ್ಟಪಡಿಸಿವೆ.</p>.<p><strong>***</strong></p>.<p> ವೇತನ ಪರಿಷ್ಕರಣೆ ಸೇರಿದಂತೆ ನೌಕರರ ಬೇಡಿಕೆಗಳನ್ನು ಸಿ.ಎಂ ಜತೆ ಚರ್ಚಿಸಿ ಈಡೇರಿಸಲಾಗುವುದು. ಹೀಗಾಗಿ ಮುಷ್ಕರ ಕೈಬಿಡಿ<br /><strong>– ಎಂ.ಚಂದ್ರಪ್ಪ, ಕೆಎಸ್ಆರ್ಟಿಸಿ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಆದರೆಕ, ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಸ್ಪಷ್ಟಪಡಿಸಿವೆ.</p>.<p>‘ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರು ಧರಣಿ ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳ ಪ್ರತಿನಿಧಿಗಳು ಧರಣಿ ನಡೆಸಲಿದ್ದಾರೆ. ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಾರ್ವನಿಕರಿಗೆ ತೊಂದರೆ ನೀಡುವ ಉದ್ದೇಶ ಇಲ್ಲ. ಮೊದಲ ಹಂತದಲ್ಲಿ ಸಾಂಕೇತಿಕ ಧರಣಿಯನ್ನಷ್ಟೇ ನಡೆಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘14 ಬೇಡಿಕೆಗಳನ್ನು ಮುಂದಿಟ್ಟು ಆರು ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಹೋರಾಟ ನಡೆಸುತ್ತಿದ್ದೇವೆ. ವೇತನ ಹೆಚ್ಚಳ ಒಪ್ಪಂದ 2020ರ ಜ.1ರಿಂದ ಬಾಕಿ ಉಳಿದಿದೆ. ಮೂರು ವರ್ಷಗಳಿಂದ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸಲು ಮುಂದಾಗಿದ್ದೇವೆ’ ಎಂದು ಹೇಳಿದರು.</p>.<p>‘ಪ್ರತಿಭಟನೆಯಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ. ಎಂದಿನಂತೆ ಸಂಚಾರಿಸಲಿವೆ’ ಎಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸ್ಪಷ್ಟಪಡಿಸಿವೆ.</p>.<p><strong>***</strong></p>.<p> ವೇತನ ಪರಿಷ್ಕರಣೆ ಸೇರಿದಂತೆ ನೌಕರರ ಬೇಡಿಕೆಗಳನ್ನು ಸಿ.ಎಂ ಜತೆ ಚರ್ಚಿಸಿ ಈಡೇರಿಸಲಾಗುವುದು. ಹೀಗಾಗಿ ಮುಷ್ಕರ ಕೈಬಿಡಿ<br /><strong>– ಎಂ.ಚಂದ್ರಪ್ಪ, ಕೆಎಸ್ಆರ್ಟಿಸಿ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>