‘ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರು ಧರಣಿ ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳ ಪ್ರತಿನಿಧಿಗಳು ಧರಣಿ ನಡೆಸಲಿದ್ದಾರೆ. ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಾರ್ವನಿಕರಿಗೆ ತೊಂದರೆ ನೀಡುವ ಉದ್ದೇಶ ಇಲ್ಲ. ಮೊದಲ ಹಂತದಲ್ಲಿ ಸಾಂಕೇತಿಕ ಧರಣಿಯನ್ನಷ್ಟೇ ನಡೆಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ‘ಪ್ರಜಾವಾಣಿ’ಗೆ ತಿಳಿಸಿದರು.