ಬೆಂಗಳೂರು: ಉಕ್ರೇನ್ನಿಂದ ಹಿಂದಿರುಗಿದ ಭಾರತೀಯರು, ಅದರಲ್ಲೂ ವಿದ್ಯಾರ್ಥಿಗಳು ವಿಮಾನ ನಿಲ್ದಾಣಗಳಿಂದ ಅವರ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ.
ರಾಜ್ಯದ ಎಲ್ಲ ವಿಮಾನ ನಿಲ್ದಾಣದೊಳಗಿನ ನೋಡಲ್ ಅಧಿಕಾರಿಗಳು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.