‘ಸಾರಿಗೆ ಸಚಿವರನ್ನು ಭೇಟಿಯಾಗಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಬೇಡಿಕೆಗಳನ್ನು ಈಡೇರಿಸುವಂತೆಯೂ ಮನವಿ ಮಾಡಿದ್ದೇವೆ. ಕೋವಿಡ್ನಿಂದಾಗಿ ಆರ್ಥಿಕ ಹಿನ್ನಡೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಅವರು ನೀಡಿದ್ದಾರೆ. ವಿವಿಧ ಘಟಕಗಳಲ್ಲಿ ನೌಕರರಿಗೆ ಕಿರುಕುಳ ಆಗುತ್ತಿರುವ ವಿಚಾರವನ್ನೂ ಅವರ ಗಮನಕ್ಕೆ ತಂದಿದ್ದೇವೆ. ಈ ಸಂಬಂಧ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸುವುದಾಗಿ ಹೇಳಿದ್ದಾರೆ. ನಮ್ಮ ಸಮಸ್ಯೆಯನ್ನು ಸಚಿವರಾದ ಆರ್.ಅಶೋಕ ಹಾಗೂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೂ ತಂದಿದ್ದೇವೆ’ ಎಂದು ಹೇಳಿದರು.