<p><strong>ಬೆಂಗಳೂರು: </strong>‘ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಸಿದ್ಧವಿದ್ದು, ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಪ್ರಕಟಿಸಲು ಸಾಧ್ಯವಿಲ್ಲ. ಆದರೆ, ಮೇ 4 ರ ಬಳಿಕ ವೇತನ ಹೆಚ್ಚಿಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಮುಷ್ಕರದಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತು ಸಾರಿಗೆ ಸಂಸ್ಥೆಯ ಇಂದಿನ ಸ್ಥಿತಿಗತಿ ಗಮನದಲ್ಲಿ ಇಟ್ಟುಕೊಂಡು, ಇದೇ 7 ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರ ಕೈಬಿಡಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೇತನ ಪರಿಷ್ಕರಣೆಗೆ ಸರ್ಕಾರ ತೀರ್ಮಾನಿಸಿದೆ. ಹಣಕಾಸು ಇಲಾಖೆಯೂ ಒಪ್ಪಿಕೊಂಡಿದೆ. ಚುನಾವಣಾ ಆಯೋಗದ ಒಪ್ಪಿಗೆ ಇಲ್ಲದೇ ವೇತನ ಪರಿಷ್ಕರಣೆ ವಿಷಯ ಪ್ರಕಟಿಸುವಂತಿಲ್ಲ. ಆಯೋಗ ಒಪ್ಪಿಗೆ ನೀಡಿದರಷ್ಟೇ ನಾವು ಪ್ರಕಟ ಮಾಡಬಹುದು. ಮೇ 4 ರಂದು ಚುನಾವಣಾ ನೀತಿ ಸಂಹಿತೆ ಮುಗಿಯಲಿದ್ದು, ಆ ಬಳಿಕ ನೀಡಲಾಗುವುದು’ ಎಂದರು.</p>.<p>‘ಸಾರಿಗೆ ನೌಕರರು ಆರನೇ ವೇತನ ಆಯೋಗದ ವರದಿ ಜಾರಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಹೆಚ್ಚುವರಿ ಸವಲತ್ತು ಕೊಡುತ್ತಿದ್ದೇವೆ. ಓವರ್ ಟೈಂ ಜತೆಗೆ, ಕಂಡಕ್ಟರ್ಗಳಿಗೆ ಶೇ 2 ರಷ್ಟು ಪ್ರೋತ್ಸಾಹ ಧನ ನೀಡುತ್ತಿದ್ದೇವೆ. 6 ನೇ ವೇತನ ಆಯೋಗಕ್ಕೆ ಸಮಾನ ವೇತನ ನೀಡಿದರೆ, ಹೆಚ್ಚುವರಿ ಸವಲತ್ತುಗಳನ್ನು ನಿಲ್ಲಿಸಬೇಕಾಗುತ್ತದೆ. ಹೀಗೆ ಮಾಡಿದರೆ ಒಂದು ಕೈಯಿಂದ ಕೊಟ್ಟು, ಇನ್ನೊಂದು ಕೈಯಿಂದ ಕಿತ್ತುಕೊಂಡಂತಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>‘ಕೋವಿಡ್ಗೆ ಮೊದಲು ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ದಿನವೂ 1 ಕೋಟಿ ಜನ ಪ್ರಯಾಣ ಮಾಡುತ್ತಿದ್ದರು. ಈಗ ಅದು 60 ಲಕ್ಷಕ್ಕೆ ಇಳಿದಿದೆ. ಸಂಸ್ಥೆಗೆ ಬರುತ್ತಿದ್ದ ಆದಾಯವೂ ಕಡಿಮೆ ಆಗಿದೆ. ನಾಲ್ಕು ನಿಗಮಗಳಿಂದ ಪ್ರತಿವರ್ಷ ₹3,200 ಕೋಟಿ ನಷ್ಟವಾಗುತ್ತಿದೆ. ಸಿಬ್ಬಂದಿಯ ವೇತನ ಹೆಚ್ಚಳ ಮಾಡಿದರೆ ಸಂಸ್ಥೆಯ ಮೇಲೆ ಹೊರೆ ಇನ್ನಷ್ಟು ಹೆಚ್ಚಾಗಲಿದೆ. ಆದರೂ ವೇತನ ಪರಿಷ್ಕರಣೆ ಸೇರಿದಂತೆ ಬೇಡಿಕೆಗಳನ್ನು ಈಡೇರಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>‘ನೌಕರರು ಕೇಳುತ್ತಿರುವುದರಲ್ಲಿ ನ್ಯಾಯವಿದೆ. ಆದರೆ, ಕೇಳುತ್ತಿರುವ ಸಂದರ್ಭ ಸರಿ ಇಲ್ಲ. ಇದನ್ನು ಅವರು ಗಮನದಲ್ಲಿ ಇಟ್ಟುಕೊಳ್ಳಬೇಕು. ನಮ್ಮಲ್ಲಿ ಹಣವಿದ್ದೂ ಕೊಡದೇ ಇದ್ದರೆ ಅವರ ಆರೋಪ ಒಪ್ಪಬಹುದಿತ್ತು. ಇತ್ತೀಚಿನ ವಿದ್ಯಮಾನಗಳ ಬಗ್ಗೆ ಅವರಿಗೆ ತಿಳಿವಳಿಕೆ ಇದೆ ಎಂದು ನಂಬಿದ್ದೇನೆ’ ಎಂದರು.</p>.<p>ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ₹30 ಲಕ್ಷ ಪರಿಹಾರ, ಅಂತರ್ ನಿಗಮ ವರ್ಗಾವಣೆ ಸೇರಿ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಸವದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಸಿದ್ಧವಿದ್ದು, ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಪ್ರಕಟಿಸಲು ಸಾಧ್ಯವಿಲ್ಲ. ಆದರೆ, ಮೇ 4 ರ ಬಳಿಕ ವೇತನ ಹೆಚ್ಚಿಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಮುಷ್ಕರದಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತು ಸಾರಿಗೆ ಸಂಸ್ಥೆಯ ಇಂದಿನ ಸ್ಥಿತಿಗತಿ ಗಮನದಲ್ಲಿ ಇಟ್ಟುಕೊಂಡು, ಇದೇ 7 ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರ ಕೈಬಿಡಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೇತನ ಪರಿಷ್ಕರಣೆಗೆ ಸರ್ಕಾರ ತೀರ್ಮಾನಿಸಿದೆ. ಹಣಕಾಸು ಇಲಾಖೆಯೂ ಒಪ್ಪಿಕೊಂಡಿದೆ. ಚುನಾವಣಾ ಆಯೋಗದ ಒಪ್ಪಿಗೆ ಇಲ್ಲದೇ ವೇತನ ಪರಿಷ್ಕರಣೆ ವಿಷಯ ಪ್ರಕಟಿಸುವಂತಿಲ್ಲ. ಆಯೋಗ ಒಪ್ಪಿಗೆ ನೀಡಿದರಷ್ಟೇ ನಾವು ಪ್ರಕಟ ಮಾಡಬಹುದು. ಮೇ 4 ರಂದು ಚುನಾವಣಾ ನೀತಿ ಸಂಹಿತೆ ಮುಗಿಯಲಿದ್ದು, ಆ ಬಳಿಕ ನೀಡಲಾಗುವುದು’ ಎಂದರು.</p>.<p>‘ಸಾರಿಗೆ ನೌಕರರು ಆರನೇ ವೇತನ ಆಯೋಗದ ವರದಿ ಜಾರಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಹೆಚ್ಚುವರಿ ಸವಲತ್ತು ಕೊಡುತ್ತಿದ್ದೇವೆ. ಓವರ್ ಟೈಂ ಜತೆಗೆ, ಕಂಡಕ್ಟರ್ಗಳಿಗೆ ಶೇ 2 ರಷ್ಟು ಪ್ರೋತ್ಸಾಹ ಧನ ನೀಡುತ್ತಿದ್ದೇವೆ. 6 ನೇ ವೇತನ ಆಯೋಗಕ್ಕೆ ಸಮಾನ ವೇತನ ನೀಡಿದರೆ, ಹೆಚ್ಚುವರಿ ಸವಲತ್ತುಗಳನ್ನು ನಿಲ್ಲಿಸಬೇಕಾಗುತ್ತದೆ. ಹೀಗೆ ಮಾಡಿದರೆ ಒಂದು ಕೈಯಿಂದ ಕೊಟ್ಟು, ಇನ್ನೊಂದು ಕೈಯಿಂದ ಕಿತ್ತುಕೊಂಡಂತಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>‘ಕೋವಿಡ್ಗೆ ಮೊದಲು ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ದಿನವೂ 1 ಕೋಟಿ ಜನ ಪ್ರಯಾಣ ಮಾಡುತ್ತಿದ್ದರು. ಈಗ ಅದು 60 ಲಕ್ಷಕ್ಕೆ ಇಳಿದಿದೆ. ಸಂಸ್ಥೆಗೆ ಬರುತ್ತಿದ್ದ ಆದಾಯವೂ ಕಡಿಮೆ ಆಗಿದೆ. ನಾಲ್ಕು ನಿಗಮಗಳಿಂದ ಪ್ರತಿವರ್ಷ ₹3,200 ಕೋಟಿ ನಷ್ಟವಾಗುತ್ತಿದೆ. ಸಿಬ್ಬಂದಿಯ ವೇತನ ಹೆಚ್ಚಳ ಮಾಡಿದರೆ ಸಂಸ್ಥೆಯ ಮೇಲೆ ಹೊರೆ ಇನ್ನಷ್ಟು ಹೆಚ್ಚಾಗಲಿದೆ. ಆದರೂ ವೇತನ ಪರಿಷ್ಕರಣೆ ಸೇರಿದಂತೆ ಬೇಡಿಕೆಗಳನ್ನು ಈಡೇರಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>‘ನೌಕರರು ಕೇಳುತ್ತಿರುವುದರಲ್ಲಿ ನ್ಯಾಯವಿದೆ. ಆದರೆ, ಕೇಳುತ್ತಿರುವ ಸಂದರ್ಭ ಸರಿ ಇಲ್ಲ. ಇದನ್ನು ಅವರು ಗಮನದಲ್ಲಿ ಇಟ್ಟುಕೊಳ್ಳಬೇಕು. ನಮ್ಮಲ್ಲಿ ಹಣವಿದ್ದೂ ಕೊಡದೇ ಇದ್ದರೆ ಅವರ ಆರೋಪ ಒಪ್ಪಬಹುದಿತ್ತು. ಇತ್ತೀಚಿನ ವಿದ್ಯಮಾನಗಳ ಬಗ್ಗೆ ಅವರಿಗೆ ತಿಳಿವಳಿಕೆ ಇದೆ ಎಂದು ನಂಬಿದ್ದೇನೆ’ ಎಂದರು.</p>.<p>ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ₹30 ಲಕ್ಷ ಪರಿಹಾರ, ಅಂತರ್ ನಿಗಮ ವರ್ಗಾವಣೆ ಸೇರಿ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಸವದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>