ಅಕ್ಟೋಬರ್ನಿಂದ ಈ ಹೊಸ ಪದ್ಧತಿ ಜಾರಿಗೆ ಬರಲಿದೆ. ವೇತನದ ಬಿಲ್ಲುಗಳನ್ನು ತಯಾರಿಸಲು ಪ್ರತಿ ತಿಂಗಳ 20ರಿಂದ 30ರವರೆಗೆ ಊಹಾತ್ಮಕ ಹಾಜರಾತಿ ಪರಿಗಣಿಸಲಾಗುತ್ತದೆ. ಆದ್ದ ರಿಂದ ಈ ಅವಧಿಯಲ್ಲಿ ನೌಕರರು ಅನಧಿಕೃತ ಗೈರು ಹಾಜರಿ ಆಗದೆ ಹಾಗೂ ರಜೆ ಪಡೆಯದೆ (ಅತಿ ಅನಿವಾರ್ಯ ಕಾರಣ ಹೊರತುಪಡಿಸಿ), ಕರ್ತವ್ಯಕ್ಕೆ ಹಾಜರಾಗಬೇಕು. ಪೂರ್ಣ ಪ್ರಮಾಣದ ಸಂಬಳ ಪಡೆಯಲು ಇದರಿಂದ ಸಾಧ್ಯ ವಾಗಲಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರಿಂದ ನಿಗದಿತ ಸಮಯಕ್ಕೆ ವೇತನ ಪಾವತಿ ಆಗದಂತಾಗಿತ್ತು.