‘ಬಿಎಂಟಿಸಿ ಭದ್ರತಾ ಮತ್ತು ಜಾಗೃತ ಶಾಖೆಯ ವಿಭಾಗೀಯ ಭದ್ರತಾ ನಿರೀಕ್ಷಕ ಕೆ.ಎಂ. ಮುನಿಕೃಷ್ಣ ದೂರು ನೀಡಿದ್ದಾರೆ. ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ, ಅಕ್ರಮ ಕೂಟ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ, ಅಪರಾಧಕ್ಕೆ ಕುಮ್ಮಕ್ಕು, ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.