ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಪುನರಾರಂಭ

Last Updated 2 ನವೆಂಬರ್ 2020, 17:56 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್ಆರ್‌ಟಿಸಿ) ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ಹೈದರಾಬಾದ್‌ಗೆ ಬಸ್‌ ಸೇವೆ ಪುನರಾರಂಭಿಸಲಿದೆ.

ಕೋವಿಡ್-19 ಹಾಗೂ ಲಾಕ್‍ಡೌನ್ ಕಾರಣದಿಂದ ಅಂತರರಾಜ್ಯ ಸಾರಿಗೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮುಂಗಡ ಆಸನಗಳನ್ನು www.ksrtc.in ವೆಬ್‌ಸೈಟ್‌ ಹಾಗೂ ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT