ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸರ್ಕಾರ ಮತ್ತು ನೌಕರರ ಕೂಟದ ನಡುವೆ ಸಂಧಾನ ನಡೆದಿತ್ತು. ಮೂರು ತಿಂಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಮಾ. 15ಕ್ಕೆ ಈ ಗಡುವು ಪೂರ್ಣಗೊಂಡಿದೆ. ಆದರೆ, ಬೇಡಿಕೆಗಳ ಈಡೇರಿಕೆ ಬಗ್ಗೆ ಯಾವುದೇ ಸ್ಪಷ್ಟ ಸ್ಪಂದನೆ ದೊರೆತಿಲ್ಲ. ಹೀಗಾಗಿ, ಮುಷ್ಕರ ನಡೆಸುತ್ತಿರುವುದಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.