<p><strong>ಬೆಂಗಳೂರು: </strong>ಬ್ರಿಟಿಷರು ಹಿಂದೂ– ಮುಸ್ಲಿಮರನ್ನು ಒಡೆದು ಆಳಿದಂತೆ, ಎಚ್.ಡಿ.ಕುಮಾರಸ್ವಾಮಿ ಜಾತಿಗಳನ್ನು ಒಡೆಯುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹರಿಹಾಯ್ದರು.</p>.<p>ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರೀತಿಯಲ್ಲಿ ಯಾವ ಮುಖ್ಯಮಂತ್ರಿಯೂ ಜಾತಿಯ ಬಗ್ಗೆ ನಿಂದನೆ ಮಾಡಿರಲಿಲ್ಲ. ಎಸ್.ಎಂ.ಕೃಷ್ಣ ಸೇರಿ ಎಲ್ಲ ಮುಖ್ಯಮಂತ್ರಿಗಳು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಆದರೆ, ಕುಮಾರಸ್ವಾಮಿ ಮಾಜಿ<br />ಮುಖ್ಯಮಂತ್ರಿಗಳ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದರು.</p>.<p>‘ನಮ್ಮ ಪಕ್ಷದಲ್ಲಿ ಪ್ರತಿಭೆಯ ಆಧಾರದಲ್ಲಿಯೇ ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸ್ಥಾನ ನೀಡಲಾಗುತ್ತದೆ. ಆದರೆ, ಕುಟುಂಬ ಆಧಾರಿತ ಪಕ್ಷವಾದ ಜೆಡಿಎಸ್ನಲ್ಲಿ ಕುಟುಂಬದ ಸದಸ್ಯತ್ವವೇ ಮುಖ್ಯ. ಮುಖ್ಯಮಂತ್ರಿ ಸ್ಥಾನ ನಿರ್ಧಾರ<br />ವಾಗುವುದೂ ಅವರ ಮನೆಯಲ್ಲೇ. ಬಿಜೆಪಿಯಲ್ಲಿ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ಶಾಸಕಾಂಗ ಪಕ್ಷದಲ್ಲಿ ತೀರ್ಮಾನಿಸಲಾಗುತ್ತದೆ. ಈಗ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ’ ಎಂದರು.</p>.<p>‘ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಾಗುವುದು. ಅಲ್ಲದೇ, ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ರಿಟಿಷರು ಹಿಂದೂ– ಮುಸ್ಲಿಮರನ್ನು ಒಡೆದು ಆಳಿದಂತೆ, ಎಚ್.ಡಿ.ಕುಮಾರಸ್ವಾಮಿ ಜಾತಿಗಳನ್ನು ಒಡೆಯುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹರಿಹಾಯ್ದರು.</p>.<p>ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರೀತಿಯಲ್ಲಿ ಯಾವ ಮುಖ್ಯಮಂತ್ರಿಯೂ ಜಾತಿಯ ಬಗ್ಗೆ ನಿಂದನೆ ಮಾಡಿರಲಿಲ್ಲ. ಎಸ್.ಎಂ.ಕೃಷ್ಣ ಸೇರಿ ಎಲ್ಲ ಮುಖ್ಯಮಂತ್ರಿಗಳು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಆದರೆ, ಕುಮಾರಸ್ವಾಮಿ ಮಾಜಿ<br />ಮುಖ್ಯಮಂತ್ರಿಗಳ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದರು.</p>.<p>‘ನಮ್ಮ ಪಕ್ಷದಲ್ಲಿ ಪ್ರತಿಭೆಯ ಆಧಾರದಲ್ಲಿಯೇ ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸ್ಥಾನ ನೀಡಲಾಗುತ್ತದೆ. ಆದರೆ, ಕುಟುಂಬ ಆಧಾರಿತ ಪಕ್ಷವಾದ ಜೆಡಿಎಸ್ನಲ್ಲಿ ಕುಟುಂಬದ ಸದಸ್ಯತ್ವವೇ ಮುಖ್ಯ. ಮುಖ್ಯಮಂತ್ರಿ ಸ್ಥಾನ ನಿರ್ಧಾರ<br />ವಾಗುವುದೂ ಅವರ ಮನೆಯಲ್ಲೇ. ಬಿಜೆಪಿಯಲ್ಲಿ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ಶಾಸಕಾಂಗ ಪಕ್ಷದಲ್ಲಿ ತೀರ್ಮಾನಿಸಲಾಗುತ್ತದೆ. ಈಗ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ’ ಎಂದರು.</p>.<p>‘ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಾಗುವುದು. ಅಲ್ಲದೇ, ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>