ಮಂಡ್ಯ: ‘ಎಚ್.ಡಿ.ಕುಮಾರಸ್ವಾಮಿ ಅವರ ಕಣ್ಣೀರು ಭಾವನಾತ್ಮಕ ಅಲ್ಲ, ಬರೀ ನಾಟಕವಷ್ಟೆ. ಅಧಿಕಾರ ಇದ್ದಾಗ ಕೆಲಸ ಮಾಡಬೇಕು, ಕಣ್ಣೀರು ಹಾಕಿದರೆ ಏನು ಪ್ರಯೋಜನ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅವರು ಮುಖ್ಯಮಂತ್ರಿಯಾಗಿದ್ದಾಗ ಫೈವ್ ಸ್ಟಾರ್ ಹೋಟೆಲ್ನಲ್ಲಿ ಇದ್ದು ಸರ್ಕಾರ ನಡೆಸುತ್ತಿದ್ದರು. ಈ ವಿಚಾರದ ಬಗ್ಗೆ ಅವರು ಇಲ್ಲಿಯವರೆಗೂ ಉತ್ತರ ಕೊಡಲು ಸಾಧ್ಯವಾಗಿಲ್ಲ’ ಎಂದರು.
‘ಎಸಿಬಿಯನ್ನು ರದ್ದು ಮಾಡಿರುವ ಹೈಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಶೀಘ್ರ ಪಕ್ಷ ಹಾಗೂ ಸರ್ಕಾರದ ನಿಲುವನ್ನು ತಿಳಿಸುತ್ತೇವೆ’ ಎಂದರು.