ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ನಡೆದ ಶಿಕ್ಷಕರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. '1999-2000ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಶಿಕ್ಷಕರು-ಉಪನ್ಯಾಸಕರ ನೇಮಕಾತಿ ನಡೆದಿತ್ತು. ಆಗ ಕೃಷ್ಣ ಕೆಪಿಎಸ್ಸಿ ಅಧ್ಯಕ್ಷರಾಗಿದ್ದರು. ಅಂತಿಮ ಸಂದರ್ಶನಕ್ಕೆ ಬಂದಿದ್ದ ವ್ಯಕ್ತಿಗಳ ಹೆಸರನ್ನೂ ನಾನು ನೋಡಿರಲಿಲ್ಲ. ಅವರಲ್ಲಿ ಯಾರೂ ನನ್ನನ್ನು ನೇರವಾಗಿ ಭೇಟಿ ಮಾಡಿರಲಿಲ್ಲ. ಆದರೆ ಈ ವ್ಯಕ್ತಿ ಅವರಿವರ ಅರ್ಜಿ ಹಿಡಿದು ಇದೊಂದು ಕೆಲಸ ಮಾಡಿ ಕೊಡಿ ಅಣ್ಣ ಎಂದು ನನ್ನ ಬಳಿ ಅಲೆಯುತ್ತಿದ್ದರು. ಹೀಗೆ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ’ ಎಂದು ಹರಿಹಾಯ್ದರು.