‘2008ರಲ್ಲಿ ಸಿದ್ದರಾಮಯ್ಯ ಸೇರಿ ಒಟ್ಟು 6 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12 ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಕಾಂಗ್ರೆಸ್ನ 8 ಮಂದಿ, ಒಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ನಿಂದ ಹಾಗೂ ಪಕ್ಷೇತರರಾಗಿ ಒಬ್ಬರು ಆಯ್ಕೆಯಾಗಿದ್ದರು. 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ 5 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲೂ ಕುರುಬರಿಗೆ ಅನ್ಯಾಯವಾಗಿದೆ’ ಎಂದು ದೂರಿದರು. ಪ್ರಭಾರ ಅಧ್ಯಕ್ಷ ಬಿ. ಸುಬ್ರಮಣ್ಯ ಇದ್ದರು