ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು, ಕುರುಬ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ಅನುದಾನ ನೀಡಬೇಕು ಮತ್ತು ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಗಳನ್ನು ಕುರುಬ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿಟ್ಟಿದೆ.