<p><strong>ತುಮಕೂರು:</strong> ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಲು ನಗರದಲ್ಲಿ ಶುಕ್ರವಾರ ನಡೆದ ಕುರುಬರ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.</p>.<p>ಕಾಗಿನೆಲೆಯಿಂದ ಜನವರಿ 15ರಂದು ಪಾದಯಾತ್ರೆ ಆರಂಭವಾಗಲಿದ್ದು,340 ಕಿ.ಮೀ ಕ್ರಮಿಸಿ ಫೆಬ್ರುವರಿ 2ರಂದು ಬೆಂಗಳೂರು ತಲುಪಲಿದೆ. ಅಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೀಸಲಾತಿ ಬೇಡಿಕೆ ಮಂಡಿಸಲಾಗುತ್ತದೆ.</p>.<p>ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿ ‘ಪಾದಯಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ಮಹಿಳಾ ಸಂಘಟಕರ ಸಭೆಗಳನ್ನು ನಡೆಸಲಾಗಿದೆ. ಈಗಾಗಲೇ ಬಾಗಲಕೋಟೆಯಲ್ಲಿ ಬೃಹತ್ ಸಮಾವೇಶ ಸಂಘಟಿಸುವ ಮೂಲಕ ನಮ್ಮ ಹಕ್ಕೊತ್ತಾಯ ಮಂಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಎಸ್ಟಿ ಮೀಸಲಾತಿ ಹೋರಾಟ ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತವಾಗಿ ನಡೆಯುತ್ತಿದೆ. ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ‘ಅಹಿಂದ’ ನಾಯಕರಾಗಿದ್ದು, ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ವಿವಿಧ ಸಮುದಾಯದವರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದೇ ರೀತಿ ಕುರುಬ ಸಮುದಾಯಕ್ಕೂ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಾಂಗದ ಅಭಿವೃದ್ಧಿಗೆ ₹ 400 ಕೋಟಿ ನೀಡಿದ್ದರು. ಆದರೆ, ಯಡಿಯೂರಪ್ಪ ಅವರು ₹ 80 ಕೋಟಿ ನೀಡಿದ್ದಾರೆ ಎಂದರು.</p>.<p>ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ‘ಎಸ್ಟಿ ಮೀಸಲಾತಿ ಹೋರಾಟದಲ್ಲಿ ಕುರುಬ ಸಮುದಾಯದವರು ಭಾಗವಹಿಸಿದ್ದಾರೆ. ಆರ್ಎಸ್ಎಸ್ನ ಯಾವುದೇ ಮುಖಂಡರು ಪಾಲ್ಗೊಂಡಿಲ್ಲ. ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಲು ನಗರದಲ್ಲಿ ಶುಕ್ರವಾರ ನಡೆದ ಕುರುಬರ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.</p>.<p>ಕಾಗಿನೆಲೆಯಿಂದ ಜನವರಿ 15ರಂದು ಪಾದಯಾತ್ರೆ ಆರಂಭವಾಗಲಿದ್ದು,340 ಕಿ.ಮೀ ಕ್ರಮಿಸಿ ಫೆಬ್ರುವರಿ 2ರಂದು ಬೆಂಗಳೂರು ತಲುಪಲಿದೆ. ಅಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೀಸಲಾತಿ ಬೇಡಿಕೆ ಮಂಡಿಸಲಾಗುತ್ತದೆ.</p>.<p>ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿ ‘ಪಾದಯಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ಮಹಿಳಾ ಸಂಘಟಕರ ಸಭೆಗಳನ್ನು ನಡೆಸಲಾಗಿದೆ. ಈಗಾಗಲೇ ಬಾಗಲಕೋಟೆಯಲ್ಲಿ ಬೃಹತ್ ಸಮಾವೇಶ ಸಂಘಟಿಸುವ ಮೂಲಕ ನಮ್ಮ ಹಕ್ಕೊತ್ತಾಯ ಮಂಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಎಸ್ಟಿ ಮೀಸಲಾತಿ ಹೋರಾಟ ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತವಾಗಿ ನಡೆಯುತ್ತಿದೆ. ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ‘ಅಹಿಂದ’ ನಾಯಕರಾಗಿದ್ದು, ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ವಿವಿಧ ಸಮುದಾಯದವರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದೇ ರೀತಿ ಕುರುಬ ಸಮುದಾಯಕ್ಕೂ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಾಂಗದ ಅಭಿವೃದ್ಧಿಗೆ ₹ 400 ಕೋಟಿ ನೀಡಿದ್ದರು. ಆದರೆ, ಯಡಿಯೂರಪ್ಪ ಅವರು ₹ 80 ಕೋಟಿ ನೀಡಿದ್ದಾರೆ ಎಂದರು.</p>.<p>ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ‘ಎಸ್ಟಿ ಮೀಸಲಾತಿ ಹೋರಾಟದಲ್ಲಿ ಕುರುಬ ಸಮುದಾಯದವರು ಭಾಗವಹಿಸಿದ್ದಾರೆ. ಆರ್ಎಸ್ಎಸ್ನ ಯಾವುದೇ ಮುಖಂಡರು ಪಾಲ್ಗೊಂಡಿಲ್ಲ. ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>