<p><strong>ಬೆಂಗಳೂರು: </strong>‘ನಗರಕ್ಕೆ ಟ್ರ್ಯಾಕ್ಟರ್ ತರಲು ಅವಕಾಶ ನೀಡದಿದ್ದರೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು’ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಗಣರಾಜ್ಯೋತ್ಸವ ಆಚರಣೆಗೆ ನಮ್ಮೀಂದ ಯಾವುದೇ ಧಕ್ಕೆ ಆಗುವುದಿಲ್ಲ. ಶಾಂತ ರೀತಿಯಲ್ಲಿ ಟ್ರ್ಯಾಕ್ಟರ್, ಬೈಕ್, ಖಾಸಗಿ ವಾಹನಗಳಲ್ಲಿ ರ್ಯಾಲಿ ನಡೆಸಲಿದ್ದೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.</p>.<p>‘ದೆಹಲಿಯಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡ್ ಬೆಂಬಲಿಸಿ ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೊಲೀಸರ ಅನುಮತಿ ಬೇಕಿಲ್ಲ. ಸರ್ಕಾರ ನಮ್ಮನ್ನು ತಡೆಯುವ ಪ್ರಯತ್ನ ಮಾಡಬಾರದು’ ಎಂದು ಎಚ್ಚರಿಸಿದರು.</p>.<p>ರೈತ ಹೋರಾಟಗಾರರು ಪ್ರತ್ಯೇಕವಾಗಿ ಪರೇಡ್ ಆರಂಭಿಸುತ್ತಿರುವ ಕುರಿತ ಪ್ರಶ್ನೆಗೆ, ‘ಈ ಹೋರಾಟಕ್ಕೆ ವಿವಿಧ ನಾಯಕರು ನಾಯಕತ್ವ ವಹಿಸಿದ್ದರೂ ಮಧ್ಯಾಹ್ನ 12ರ ಹೊತ್ತಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಒಟ್ಟಾಗಲಿದ್ದೇವೆ’ ಎಂದು ತಿಳಿಸಿದರು.</p>.<p>‘ರಾಜಕಾರಣಿಗಳ ಬೆಂಬಲವನ್ನು ನಾವು ಕೇಳಿಲ್ಲ. ಅವರು ಪ್ರತ್ಯೇಕವಾಗಿ ಹೋರಾಟ ಮಾಡಲಿ. ಮಂಗಳವಾರ ಅವರು ನಮ್ಮ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡುವುದಿಲ್ಲ’ ಎಂದೂ ಸ್ಪಷ್ಟಪಡಿಸಿದರು.</p>.<p>‘ಸಿನಿಮಾ ಡೈಲಾಗ್ ಹೊಡೆಯುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ರೈತರು ಸೊಪ್ಪು ಹಾಕುವುದಿಲ್ಲ. ಅವರೊಬ್ಬ ಸಿನಿಮಾ ಮಂತ್ರಿ. ಅವರಿಗೆ ಕೃಷಿಯ ಗಂಧವೇ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಗರಕ್ಕೆ ಟ್ರ್ಯಾಕ್ಟರ್ ತರಲು ಅವಕಾಶ ನೀಡದಿದ್ದರೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು’ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಗಣರಾಜ್ಯೋತ್ಸವ ಆಚರಣೆಗೆ ನಮ್ಮೀಂದ ಯಾವುದೇ ಧಕ್ಕೆ ಆಗುವುದಿಲ್ಲ. ಶಾಂತ ರೀತಿಯಲ್ಲಿ ಟ್ರ್ಯಾಕ್ಟರ್, ಬೈಕ್, ಖಾಸಗಿ ವಾಹನಗಳಲ್ಲಿ ರ್ಯಾಲಿ ನಡೆಸಲಿದ್ದೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.</p>.<p>‘ದೆಹಲಿಯಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡ್ ಬೆಂಬಲಿಸಿ ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೊಲೀಸರ ಅನುಮತಿ ಬೇಕಿಲ್ಲ. ಸರ್ಕಾರ ನಮ್ಮನ್ನು ತಡೆಯುವ ಪ್ರಯತ್ನ ಮಾಡಬಾರದು’ ಎಂದು ಎಚ್ಚರಿಸಿದರು.</p>.<p>ರೈತ ಹೋರಾಟಗಾರರು ಪ್ರತ್ಯೇಕವಾಗಿ ಪರೇಡ್ ಆರಂಭಿಸುತ್ತಿರುವ ಕುರಿತ ಪ್ರಶ್ನೆಗೆ, ‘ಈ ಹೋರಾಟಕ್ಕೆ ವಿವಿಧ ನಾಯಕರು ನಾಯಕತ್ವ ವಹಿಸಿದ್ದರೂ ಮಧ್ಯಾಹ್ನ 12ರ ಹೊತ್ತಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಒಟ್ಟಾಗಲಿದ್ದೇವೆ’ ಎಂದು ತಿಳಿಸಿದರು.</p>.<p>‘ರಾಜಕಾರಣಿಗಳ ಬೆಂಬಲವನ್ನು ನಾವು ಕೇಳಿಲ್ಲ. ಅವರು ಪ್ರತ್ಯೇಕವಾಗಿ ಹೋರಾಟ ಮಾಡಲಿ. ಮಂಗಳವಾರ ಅವರು ನಮ್ಮ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡುವುದಿಲ್ಲ’ ಎಂದೂ ಸ್ಪಷ್ಟಪಡಿಸಿದರು.</p>.<p>‘ಸಿನಿಮಾ ಡೈಲಾಗ್ ಹೊಡೆಯುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ರೈತರು ಸೊಪ್ಪು ಹಾಕುವುದಿಲ್ಲ. ಅವರೊಬ್ಬ ಸಿನಿಮಾ ಮಂತ್ರಿ. ಅವರಿಗೆ ಕೃಷಿಯ ಗಂಧವೇ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>