ಹುಕ್ಕೇರಿ ತಾಲ್ಲೂಕಿನ ನಿಡಸೋಸಿ ಗ್ರಾಮದ ದುರದುಂಡಿ ಹೂಗಾರ ಎನ್ನುವವರು, ಮನೆಯಲ್ಲಿ ನಡೆದ ಗಲಾಟೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕುಟುಂಬದವರು ಸಂಕೇಶ್ವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಸಲೈನ್ ಹಾಕಿ ಆರೈಕೆ ಮಾಡಿದ್ದ ಅಲ್ಲಿನ ವೈದ್ಯಕೀಯ ಸಿಬ್ಬಂದಿ, ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ಹೋಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ, ಬಿಮ್ಸ್ನಲ್ಲಿ ಕೋವಿಡ್ ರೋಗಿಗಳಿಗೆ ಮಾತ್ರ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗುವಂತೆ ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ.