ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ವಿಷಯದಲ್ಲಿ ಇಂದು ಕಾಂಗ್ರೆಸ್‌ ಪ್ರತಿಭಟನೆ

Last Updated 19 ಜೂನ್ 2022, 18:29 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಗುರಿಯಾಗಿಸಿ ನಡೆಸುತ್ತಿರುವ ‘ಹಗೆತನದ ರಾಜಕಾರಣ’ವನ್ನು ವಿರೋಧಿಸಿ ಲಕ್ಷಾಂತರ ಕಾರ್ಯಕರ್ತರು ಸೋಮವಾರ ದೇಶದಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಪಕ್ಷದ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಯಾಗಲಿದ್ದು, ರಾಹುಲ್‌ ಗಾಂಧಿ ವಿರುದ್ಧದ ಇ.ಡಿ ವಿಚಾರಣೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪಕ್ಷದ ಸಂಸದರ ಮೇಲೆ ದೆಹಲಿ ಪೊಲೀಸರು ಎಸಗಿರುವ ದೌರ್ಜನ್ಯದ ವಿಚಾರವನ್ನು ಅವರ ಗಮನಕ್ಕೆ ತರಲಿದೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT