ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ನಡೆಸುತ್ತಿರುವ ‘ಹಗೆತನದ ರಾಜಕಾರಣ’ವನ್ನು ವಿರೋಧಿಸಿ ಲಕ್ಷಾಂತರ ಕಾರ್ಯಕರ್ತರು ಸೋಮವಾರ ದೇಶದಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಪಕ್ಷದ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದು, ರಾಹುಲ್ ಗಾಂಧಿ ವಿರುದ್ಧದ ಇ.ಡಿ ವಿಚಾರಣೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪಕ್ಷದ ಸಂಸದರ ಮೇಲೆ ದೆಹಲಿ ಪೊಲೀಸರು ಎಸಗಿರುವ ದೌರ್ಜನ್ಯದ ವಿಚಾರವನ್ನು ಅವರ ಗಮನಕ್ಕೆ ತರಲಿದೆ ಎಂದೂ ಹೇಳಿದೆ.