ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನ 6 ಕಡೆ ಜಮೀನು: ಸಚಿವ ಅಶೋಕ

ಬೆಂಗಳೂರು: ಕೋವಿಡ್ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
‘ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
‘ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಎಲ್ಲರೂ ಜತೆಯಾಗಿದ್ದೇವೆ. ವಿರೋಧ ಪಕ್ಷದವರು ಆರೋಪಿಸುವಂತೆ ನಮ್ಮಲ್ಲಿ ಯಾವುದೇ ಒಡಕು ಇಲ್ಲ’ ಎಂದು ಅಶೋಕ ಹೇಳಿದರು.
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.