ಹಿಂದಿನ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ದೊರೆತಿರಲಿಲ್ಲ. ಈ ಮಸೂದೆಯ ಮೇಲಿನ ಚರ್ಚೆಯ ಬಳಿಕ, ಅನುಮೋದನೆ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ ಮನವಿ ಮಾಡಿಸಿದರು. ಮಸೂದೆಯನ್ನು ಧ್ವನಿಮತದ ಬದಲು, ಮತಕ್ಕೆ ಹಾಕುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಅದಕ್ಕೆ ಒಪ್ಪಿದ ಸಭಾಪತಿ ‘ವಿಭಜನೆ ಮತ’ ಮುಂದಾದರು.