ಮಂಗಳವಾರ ಇಡೀ ದಿನ ಮಸೂದೆಯ ಕುರಿತು ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್, ಕಾಂಗ್ರೆಸ್ನ ಹಲವು ಸದಸ್ಯರು ಆಗ್ರಹಿಸಿದರು. ಬಿಜೆಪಿ ಸದಸ್ಯರು ಈ ಬೇಡಿಕೆ ವಿರೋಧಿಸಿದರು. ವಾಕ್ಸಮರ ಮುಂದುವರೆಯಿತು. ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ಸದನದ ಕಲಾಪವನ್ನು ಮಂಗಳವಾರ ಬೆಳಿಗ್ಗೆ 11ಕ್ಕೆ ಮುಂದೂಡಿದರು.